ನವದೆಹಲಿ: 74 ನೇ ಸ್ವಾತಂತ್ರ್ಯ ದಿನಾಚರಣೆಗಾಗಿ ಫುಲ್ ಡ್ರೆಸ್ ಪೂರ್ವಾಭ್ಯಾಸವನ್ನು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಇಂದು ಬೆಳಿಗ್ಗೆ ನಡೆಸಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15 ರಂದು ಆಚರಿಸಲಾಗುವುದು. ಕೊರೋನಾ ಕಾರಣದಿಂದಾಗಿ ಸರಳವಾಗಿ ಈ ಬಾರಿಯ ಸ್ವಾತಂತ್ರ್ಯೋತ್ಸವ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ತ್ರಿವರ್ಣವನ್ನು ಹಾರಿಸಿ ಕೆಂಪು ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ರಾಷ್ಟ್ರ ರಾಜಧಾನಿಯಾದ್ಯಂತ ಸುರಕ್ಷಿತ ಮತ್ತು ಸುಗಮ ವಾಹನ ಸಂಚಾರವನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ. ಪೂರ್ವಾಭ್ಯಾಸ ದಿನವಾದ ಇಂದು ಕೂಡ ಸ್ವಾತಂತ್ರ್ಯ ದಿನದಂತೆಯೇ ಅದೇ ರೀತಿಯ ಸಂಚಾರ ನಿರ್ಬಂಧಗಳನ್ನು ಹೇರಲಾಗಿದೆ. ದೆಹಲಿ ಸಂಚಾರ ಪೊಲೀಸರು ಬೆಳಿಗ್ಗೆ 4 ರಿಂದ ಬೆಳಿಗ್ಗೆ 10 ರವರೆಗೆ ಸಾಮಾನ್ಯ ಸಂಚಾರಕ್ಕಾಗಿ ರಸ್ತೆಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ. ನೇತಾಜಿ ಸುಭಾಷ್ ಮಾರ್ಗ, ಲೋಥಿಯನ್ ರಸ್ತೆ, ಎಸ್ಪಿ ಮುಖರ್ಜಿ ಮಾರ್ಗ, ಚಾಂದನಿ ಚೌಕ್ ರಸ್ತೆ, ರಿಂಗ್ ರಸ್ತೆ, ರಾಜ್ಘಾಟ್ನಿಂದ ಐಎಸ್ಬಿಟಿ ಮತ್ತು ಅದರ ಲಿಂಕ್ ರಸ್ತೆಗಳನ್ನು ಇಂದು ಮತ್ತು ಆ.15ರಂದು ಮುಚ್ಚಲಾಗುತ್ತದೆ.
ವರದಿಗಳ ಪ್ರಕಾರ, ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದೆಹಲಿ ಪೊಲೀಸರು ಆಹ್ವಾನಿತರಿಗೆ ಗೃಹ ಸಚಿವಾಲಯ ಮತ್ತು ಆರೋಗ್ಯ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.