ನವದೆಹಲಿ: ಕಳೆದ ಕೆಲ ವರ್ಷಗಳಿಂದೀಚೆಗೆ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯಾಗಿವೆ. ದೇಶದ ಅಭಿವೃದ್ಧಿ ಪ್ರಾಮಾಣಿಕ ತೆರಿಗೆ ಪಾವತಿದಾರರಿಂದ ಮಾತ್ರ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.
ಪಾರದರ್ಶಕ ತೆರಿಗೆ ವೇದಿಕೆ ‘Transparent Taxation- Honoring the Honest’ಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ವೇದಿಕೆಯನ್ನು ಪ್ರಾಮಾಣಿಕ ತೆರಿಗೆದಾರರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆರಂಭ ಮಾಡಲಾಗಿದೆ. ಪ್ರಾಮಾಣಿಕವಾಗಿ ದೇಶಕ್ಕೆ ತೆರಿಗೆ ನೀಡುವುದು ಪ್ರತಿಯೊಬ್ಬ ತೆರಿಗೆ ಪಾವತಿದಾರನ ಕರ್ತವ್ಯ. ಪ್ರಸ್ತುತ ತೆರಿಗೆ ನೀತಿಯಲ್ಲಿ ಬದಲಾವಣೆ ಮಾಡಲಾಗಿದ್ದು, ದೇಶದ ಅಭಿವೃದ್ಧಿಯ ಹೊಸ ಅಧ್ಯಾಯ ತೆರೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಈಗ ತೆರಿಗೆ ಪಾವತಿಯು ಸರಳ, ಸುಲಭವಾಗಿದ್ದು ಮತ್ತಷ್ಟು ಜನಸ್ನೇಹಿಯಾಗಿದೆ. ಈ ವೇದಿಕೆ ಗರಿಷ್ಠ ಅಭಿವೃದ್ಧಿಯ ಕನಸಿನ ಜೊತೆಗೆ ಆರಂಭವಾಗಿದ್ದು, ಪ್ರತಿಯೊಂದು ನೀತಿ ನಿಯಮಗಳನ್ನು ನಾಗರಿಕ ಸ್ನೇಹಿ, ಸಾರ್ವಜನಿಕ ಸ್ನೇಹಿಯಾಗಿಸುವಲ್ಲಿಯೂ ಸಹಕರಿಸಲಿದೆ ಎಂದು ತಿಳಿಸಿದ್ದಾರೆ.
ಮುಖರಹಿತ ಮೌಲ್ಯಮಾಪನ ಮತ್ತು ತೆರಿಗೆದಾರರ ಚಾರ್ಟರ್ ಅನ್ನು ಇಂದಿನಿಂದ ಜಾರಿಗೆ ತರಲಾಗುತ್ತಿದ್ದು, ಸೆಪ್ಟೆಂಬರ್ 25 ರಿಂದ ಮುಖರಹಿತ ಮೇಲ್ಮನವಿ ಸೇವೆ ಲಭ್ಯವಾಗಲಿದೆ ಎಂದು ಪಿಎಂ ಮೋದಿ ಹೇಳಿದ್ದಾರೆ.
ತೆರಿಗೆ ಪಾವತಿಸಲು ಸಮರ್ಥರಾದ ಆದರೆ ತೆರಿಗೆ ವ್ಯಾಪ್ತಿಯಲ್ಲಿಲ್ಲದವರು ಮುಂದೆ ಬಂದು ತೆರಿಗೆ ಪಾವತಿ ಮಾಡಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.
ಇನ್ನು ಈ ವೇದಿಕೆಯ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್, ಇದು ತೆರಿಗೆದಾರರಿಗೆ ಸುಧಾರಣೆಗಳನ್ನು ಅರ್ಥ ಮಾಡಿಕೊಳ್ಳಲು ಸಹಕರಿಸುತ್ತದೆ. ಜೊತೆಗೆ ತೆರಿಗೆ ಪಾವತಿಯಲ್ಲಿ ಪಾರದರ್ಶಕತೆಯನ್ನು ಪರಿಚಯಿಸಲು ಸಹಾಯ ಮಾಡಲಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.