ನವದೆಹಲಿ: ತನ್ನ ಮಹತ್ವಾಕಾಂಕ್ಷೆಯ ಆರೋಗ್ಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರವು ದೃಢ ಹೆಜ್ಜೆಯನ್ನು ಮುಂದಿಟ್ಟಿದೆ. ದೇಶದ ಬಡವರಲ್ಲದ ಜನಸಂಖ್ಯೆಯನ್ನು ಕೂಡ ಆರೋಗ್ಯ ವಿಮಾ ಯೋಜನೆಯ ವ್ಯಾಪ್ತಿಗೆ ತರಲು ಅದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಮಾತ್ರವಲ್ಲದೆ, ತನ್ನ ವಿವಿಧ ಆರೋಗ್ಯ ವಿಮಾ ಯೋಜನೆಗಳನ್ನು ಆಯುಷ್ಮಾನ್ ಭಾರತ್ ವ್ಯಾಪ್ತಿಯೊಳಗೆ ಒಳಪಡಿಸಲು ಅದು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಕೂಸಾಗಿರುವ ಆಯುಷ್ಮಾನ್ ಭಾರತ, ಬಿಪಿಎಲ್ ಕುಟುಂಬಗಳಿಗೆ ವಾರ್ಷಿಕ ಐದು ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ಒದಗಿಸುತ್ತದೆ.
ದೇಶದ ಮಧ್ಯಮವರ್ಗದ ಮತ್ತು ಬಡವರಲ್ಲದ ಜನಸಂಖ್ಯೆಯನ್ನು ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಒಳಪಡಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (ಎನ್ಎಚ್ಎ) ಆಡಳಿತ ಮಂಡಳಿ ಗುರುವಾರ ಪ್ರಾಯೋಗಿಕವಾಗಿ ಮುಂದುವರೆಯಲು ಮುಂದಾಗಿದೆ. ಅನೌಪಚಾರಿಕ ವಲಯದ ಕೆಲಸಗಾರರು, ಸ್ವ ಉದ್ಯೋಗಿಗಳು, ವೃತ್ತಿಪರರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಲ್ಲಿನ ಉದ್ಯೋಗಿಗಳನ್ನು ಇದರಲ್ಲಿ ಒಳಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಅವರು ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಅನುಷ್ಠಾನವನ್ನು ಪರಿಶೀಲಿಸುವ ಸಲುವಾಗಿ ನಡೆದ ಸಭೆಯ ನೇತೃತ್ವವನ್ನು ವಹಿಸಿದ್ದರು. ಈ ಸಭೆಯಲ್ಲಿ ಯೋಜನೆಯ ವ್ಯಾಪ್ತಿ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಕಾರ್ಯಸೂಚಿಗಳಲ್ಲಿ, ಆಯುಷ್ಮಾನ್ ಯೋಜನೆ ಮೇಲೆ ಕೋವಿಡ್ -19 ರ ಪ್ರಭಾವ, ಆರೋಗ್ಯ ವಿತರಣೆಯಲ್ಲಿ ಸಾಂಕ್ರಾಮಿಕ ರೋಗದಿಂದ ಉಂಟಾದ ಸವಾಲುಗಳನ್ನು ಪರಿಹರಿಸುವ ಮಾರ್ಗಗಳು ಮತ್ತು ವಿವಿಧ ರಾಜ್ಯಗಳಲ್ಲಿ ಎಂಪನೇಲ್ಡ್ ಖಾಸಗಿ ಆರೋಗ್ಯ ಪೂರೈಕೆದಾರರ ಕಾರ್ಯಕ್ಷಮತೆ ಮುಂತಾದವುಗಳು ಸೇರಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.