ಲಕ್ನೋ: ಬೆಂಗಳೂರು ಗಲಭೆಗೆ ಕಾರಣವೆಂದು ನಂಬಲಾಗಿರುವ, ಫೇಸ್ಬುಕ್ನಲ್ಲಿ ಪೈಗಂಬರ್ ವಿರೋಧಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ತಲೆ ತಂದವರಿಗೆ 51 ಲಕ್ಷ ರೂ. ಗಳ ಬಹುಮಾನ ನೀಡುವುದಾಗಿ ಉತ್ತರ ಪ್ರದೇಶದ ಮೀರತ್ನ ಮುಸ್ಲಿಂ ನಾಯಕ ಶಜೇಬ್ ರಿಝ್ವಿ ಘೋಷಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ರಿಝ್ವಿ ವಿರುದ್ಧ ಪ್ರಕರಣವೂ ದಾಖಲಾಗಿದೆ.
ಈ ಸಂಬಂಧ ರಿಝ್ವಿ ವಿಡಿಯೋವೊಂದನ್ನು ಹರಿಯ ಬಿಟ್ಟಿದ್ದು, ಇದರಲ್ಲಿ ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಆರೋಪಿ ನವೀನ್ ತಲೆ ಕಡಿದು ತಂದು ಕೊಟ್ಟವರಿಗೆ ಅರ್ಧಕೋಟಿ ಹಣ ನೀಡುವುದಾಗಿ ಹೇಳಿದ್ದಾನೆ.
ಕೋಮು ಸೌಹಾರ್ದತೆಗೆ ಭಂಗ ಮಾಡಲು ಪ್ರಯತ್ನ ನಡೆಸುತ್ತಿರುವ ಆರೋಪದ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ವಿಚಾರಣೆ ನಡೆಸಿ ಕ್ರಮಕೈಗೊಳ್ಳುವ ಭರವಸೆಯನ್ನೂ ಮೀರತ್ನ ಗ್ರಾಮೀಣ ಪ್ರದೇಶದ ಎಸ್ಪಿ ಅವಿನಾಶ್ ಪಾಂಡೆ ನೀಡಿದ್ದಾರೆ.
ಬೆಂಗಳೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪತಿ ಖಲೀಂ ಪಾಶಾ ಸೇರಿದಂತೆ, ಎಸ್ಡಿಪಿಐ ಸದಸ್ಯರು ಸೇರಿದಂತೆ 206 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.