ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆ ಇನ್ನೊಂದು ವಾರದಲ್ಲೇ ಗಣೇಶ ಹಬ್ಬ ಚತುರ್ಥಿಯೂ ಬರಲಿದ್ದು, ಗಣೇಶೋತ್ಸವ ಆಚರಣೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನೂ ಹೊರಡಿಸಿದೆ.
ಈ ಹಿಂದಿನಂತೆ ಯಾವುದೇ ದೊಡ್ಡ ಮಟ್ಟದ ಸಮಾರಂಭಗಳನ್ನು ಹಮ್ಮಿಕೊಳ್ಳದೆ ಸರಳವಾಗಿ ದೇವಾಲಯ, ಮನೆಗಳಲ್ಲಿಯೇ ಆಚರಿಸುವಂತೆಯೂ ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡದಂತೆ ತಿಳಿಸಲಾಗಿದೆ. ಸಾರ್ವಜನಿಕ ನದಿ, ಕೊಳ, ಹಳ್ಳ, ಬಾವಿಗಳಲ್ಲಿ ಗಣೇಶನ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ, ಮೆರವಣಿಗೆ ನಿಷೇಧ, ದೇಗುಲಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳಾದ ಸ್ಯಾನಿಟೈಸೇಶನ್, ಥರ್ಮಲ್ ಸ್ಕ್ರೀನಿಂಗ್, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧಾರಣೆ ಮೊದಲಾದವುಗಳನ್ನು ಕಡ್ಡಾಯವಾಗಿ ಅನುಸರಿಸುವುದು, ಕೊರೋನಾ ನಿಯಂತ್ರಣ ದೃಷ್ಟಿಯಿಂದ ಕೇಂದ್ರ, ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವಂತೆಯೂ ಸೂಚಿಸಲಾಗಿದೆ.
ಜೊತೆಗೆ ಶಾಂತಿ ಸುವ್ಯವಸ್ಥೆ ಪಾಲನೆಯನ್ನು ಕಾಪಾಡುವ ಮೂಲಕ ಸೌಹಾರ್ದತೆ, ಸಾಮರಸ್ಯ ಕಾಪಾಡುವುವಂತೆಯೂ ಗಣೇಶೋತ್ಸವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆ ಮೂಲಕ ಕೊರೋನಾದಿಂದ ನಮ್ಮನ್ನು ನಾವು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಚ್ಚರವನ್ನು ವಹಿಸಿ ಹಬ್ಬವನ್ನು ಆಚರಿಸುವಂತೆಯೂ ಸರ್ಕಾರ ಜನರಲ್ಲಿ ಮನವಿ ಮಾಡಿಕೊಂಡಿದೆ.
#COVID19 , govt issues guidelines to celebrate Ganesha Habba !
1)No public Ganesha pendals
2) idols are not allowed to immerse in lakes & ponds
3) public are requested to immerse Ganesha at their house
4) Hand sanitiser, masks must at temples @NewIndianXpress @santwana99 pic.twitter.com/pxgolMWarL— Ashwini M Sripad (@AshwiniMS_TNIE) August 14, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.