ನವದೆಹಲಿ: ಕೆಂಪುಕೋಟೆಯಲ್ಲಿ ಇಂದು ಸ್ವಾತಂತ್ರ್ಯೋತ್ಸವ ಸಮಾರಂಭದ ಧ್ವಜಾರೋಹಣ ನಡೆಸಿ ಸಂದೇಶ ನೀಡಿರುವ ಪ್ರಧಾನಿ ಮೋದಿ ಅವರ ಭಾಷಣವನ್ನು ಶ್ಲಾಘಿಸಿರುವ ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಈ ಮಾತುಗಳು ದೇಶದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವಲ್ಲಿ ಜನರಿಗೆ ಶಕ್ತಿ, ವಿಶ್ವಾಸ ತುಂಬಲಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ವೆಂಕಯ್ಯ ನಾಯ್ಡು ಅವರು, ಕಾಂಗ್ರೇಸ್ಸೇತರ ಧೀರ್ಘಾವಧಿಯ ಪ್ರಧಾನಿ ಎಂದು ಗುರುತಿಸಿಕೊಂಡಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಅವರ ಇಂದಿನ ಭಾಷಣವನ್ನು ಸಮಗ್ರವಾಗಿ ಹೇಳುವುದಾದರೆ, ದೂರದೃಷ್ಟಿತ್ವ ಮತ್ತು ಅಭಿವೃದ್ಧಿಯ ಮುಂದಾಲೋಚನೆಯ ಮಾತುಗಳಾಗಿದ್ದು ಸ್ಫೂರ್ತಿ ಹುಟ್ಟಿಸುವಂತಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕತೆಯನ್ನು ಬಲಪಡಿಸುವ, ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿಯೂ ಈ ಭಾಷಣ ಜನರಲ್ಲಿ ವಿಶ್ವಾಸ, ಭರವಸೆ ಹುಟ್ಟುಹಾಕಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ 75 ವರ್ಷಗಳ ಬಳಿಕ ಸ್ವಾವಲಂಬನೆಯ ಆತ್ಮನಿರ್ಭರ ಭಾರತ ನಿರ್ಮಾಣದ ಹಾದಿಯ ಹೊಸ ಹೊಳಹುಗಳನ್ನು ಪ್ರಧಾನಿ ಮೋದಿ ಅನಾವರಣ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನದ ಬಗ್ಗೆಯೂ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೇಶಭಕ್ತರ ತ್ಯಾಗ, ಭಾರತೀಯರ ದೇಶಭಕ್ತಿಯ ಪ್ರತೀಕವೇ ಸ್ವಾತಂತ್ರ್ಯ ಎಂದು ಹೇಳಿದ್ದಾರೆ.
आज़ादी के 75 वर्ष पूरे होने वाले हैं, प्रधानमंत्री ने आत्म निर्भर भारत की रूप रेखा प्रस्तुत की है। चौथी सबसे लंबी अवधि तक देश के प्रधानमंत्री पद का दायित्व संभालने का यश प्राप्त हुआ है, इस यश के लिए श्री मोदी का अभिनन्दन।@narendramodi
— Vice President of India (@VPSecretariat) August 15, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.