ಭೋಪಾಲ್: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯ ನಿಟ್ಟಿನಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ರಾಮಾಯಣ್ ಸರ್ಕ್ಯೂಟ್ ಮತ್ತು ರಾಮವನ ಗಮನಫಥ ಅಭಿವೃದ್ಧಿ ಮಾಡಲಾಗುವುದು ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು ಬಳಿಕ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಮಾತನಾಡಿದ್ದಾರೆ. ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯತ್ತ ಚಿತ್ತ ನೆಟ್ಟಿದ್ದು, ಇದರಿಂದಾಗಿ ಉದ್ಯೋಗಾವಕಾಶಗಳೂ ಲಭ್ಯವಾಗಲಿವೆ ಎಂದು ಚೌಹಾಣ್ ತಿಳಿಸಿದ್ದಾರೆ.
ಅಮರ ಕಂಟಕ್ ಸರ್ಕ್ಯೂಟ್, ತೀರ್ಥಂಕರ ಸರ್ಕ್ಯೂಟ್, ಮಾ ನರ್ಮದಾ ಪರಿಕ್ರಮಗಳ ಅಭಿವೃದ್ಧಿಯತ್ತಲೂ ಗಮನ ಹರಿಸಲಾಗುವುದು. ಪ್ರಭು ಶ್ರೀರಾಮ ವನವಾಸ ಮುಗಿಸಿ ಮರಳಿದ ಹಾದಿಯನ್ನು ರಾಮವನ ಗಮನಪಥ ಎಂದು ಬಿಂಬಿಸಲಿದ್ದು, ಇದನ್ನು ಚಿತ್ರಕೂಟದಿಂದ ಅಮರಕಂಟಕದವರೆಗೂ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದ್ದಾರೆ. ಚಂಬಲ್ ಪ್ರಗತಿ ಮಾರ್ಗದ ಅಭಿವೃದ್ಧಿ ಬಗ್ಗೆಯೂ ಚಿಂತನೆಗಳನ್ನು ನಡೆಸಲಾಗುತ್ತಿದೆ ಎಂದು ಚೌಹಾಣ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.