ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಭಾನುವಾರ ಅವರಿಗೆ ಗೌರವ ಸಲ್ಲಿಸಿದರು.
“ಪ್ರೀತಿಯ ಅಟಲ್ ಜಿ ಅವರ ಪುಣ್ಯ ತಿಥಿಯಂದು ಗೌರವ. ಭಾರತವು ಅವರ ಅತ್ಯುತ್ತಮ ಸೇವೆ ಮತ್ತು ನಮ್ಮ ರಾಷ್ಟ್ರದ ಪ್ರಗತಿಗಾಗಿ ಅವರು ಮಾಡಿದ ಪ್ರಯತ್ನಗಳನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುತ್ತದೆ” ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
1924 ರ ಡಿಸೆಂಬರ್ 25 ರಂದು ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಜನಿಸಿದ ವಾಜಪೇಯಿ ಅವರು ಭಾರತೀಯ ಜನತಾ ಪಕ್ಷದಿಂದ ಪ್ರಧಾನ ಮಂತ್ರಿಯಾದ ಮೊದಲ ವ್ಯಕ್ತಿ. ಅವರು ಮೂರು ಬಾರಿ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
ಇಂದು ಬೆಳಿಗ್ಗೆ, ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪಿಎಂ ಮೋದಿ ಅವರು ಮಾಜಿ ಪ್ರಧಾನ ಮಂತ್ರಿ ಅಟಲ್ ಅವರ ಸಮಾಧಿ ಸ್ಥಳ ‘ಸದೈವ್ ಅಟಲ್’ಗೆ ತೆರಳಿ, ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ ಗೌರವ ಸಲ್ಲಿಸಿದರು.
“ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಜಿ ಅವರು ದೇಶಭಕ್ತಿ ಮತ್ತು ಭಾರತೀಯ ಸಂಸ್ಕೃತಿಯ ಧ್ವನಿಯಾಗಿದ್ದರು. ಅವರು ಸಮರ್ಪಿತ ರಾಜಕಾರಣಿ ಮತ್ತು ನುರಿತ ಸಂಘಟಕರಾಗಿದ್ದರು ಮತ್ತು ಅವರು ಬಿಜೆಪಿಯ ಅಡಿಪಾಯ ಮತ್ತು ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದರು ಮತ್ತು ಲಕ್ಷಾಂತರ ಕಾರ್ಯಕರ್ತಿರಗೆ ದೇಶದ ಸೇವೆ ಮಾಡಲು ಪ್ರೇರಣೆ ನೀಡಿದರು” ಎಂದು ಅಮಿತ್ ಶಾ ಟ್ವೀಟ್ ನಲ್ಲಿತಿಳಿಸಿದ್ದಾರೆ.
Tributes to beloved Atal Ji on his Punya Tithi. India will always remember his outstanding service and efforts towards our nation’s progress. pic.twitter.com/ZF0H3vEPVd
— Narendra Modi (@narendramodi) August 16, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.