ನವದೆಹಲಿ: ಭಾರತೀಯ ರೈಲ್ವೆಯು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಒರಿಸ್ಸಾ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಗರೀಬ್ ಕಲ್ಯಾಣ್ ರೋಜ್ಗಾರ್ ಅಭಿಯಾನದ ಅಡಿಯಲ್ಲಿ 5.5 ಲಕ್ಷಕ್ಕೂ ಹೆಚ್ಚು ಮಾನವ ದಿನಗಳ ಕೆಲಸಗಳನ್ನು ಸೃಷ್ಟಿಸಿದೆ ಎಂದು ರೈಲ್ವೆ ಸಚಿವಾಲಯ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿದೆ.
ರೈಲ್ವೆ ಸಚಿವ ಪಿಯೂಷ್ ಗೋಯಲ್ ಈ ಯೋಜನೆಗಳ ಪ್ರಗತಿಯನ್ನು ಮತ್ತು ಈ ಯೋಜನೆಯಡಿ ಈ ರಾಜ್ಯಗಳ ವಲಸೆ ಕಾರ್ಮಿಕರಿಗೆ ಕೆಲಸದ ಅವಕಾಶಗಳ ಸೃಷ್ಟಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಅದು ಹೇಳಿದೆ.
“2,988 ಕೋಟಿ ರೂ.ಗಳ ಮೌಲ್ಯದ ಸುಮಾರು 165 ರೈಲ್ವೆ ಮೂಲಸೌಕರ್ಯ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ. ಆಗಸ್ಟ್ 14, 2020 ರವರೆಗೆ 11,296 ಕಾರ್ಮಿಕರು ಈ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳಿಗಾಗಿ 1,336.84 ಕೋಟಿ ರೂ.ಗಳ ಪಾವತಿಯನ್ನು ಗುತ್ತಿಗೆದಾರರಿಗೆ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿಕೆ ತಿಳಿಸಿದೆ.
ರಾಜ್ಯ ಸರ್ಕಾರಗಳೊಂದಿಗೆ ನಿಕಟ ಸಮನ್ವಯವನ್ನು ಸ್ಥಾಪಿಸಲು ರೈಲ್ವೆ ಪ್ರತಿ ಜಿಲ್ಲೆ ಮತ್ತು ರಾಜ್ಯಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.
ವಲಸಿಗರು ಯೋಜನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಕೆಲಸಕ್ಕೆ ಅನುಗುಣವಾಗಿ ಪಾವತಿಯನ್ನು ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಪೂರ್ವಭಾವಿಯಾಗಿ ಕಾರ್ಯನಿರ್ವಹಿಸುವಂತೆ ಗೋಯಲ್ ಅವರು ರೈಲ್ವೆ ಆಡಳಿತಕ್ಕೆ ವಲಯ ಮಟ್ಟದಲ್ಲಿ ನಿರ್ದೇಶನ ನೀಡಿದ್ದಾರೆ ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.