ನವದೆಹಲಿ: ಕೊರೋನಾ ಸೋಂಕಿನ ನಡುವೆಯೇ ಈ ಬಾರಿಯ ಸಂಸತ್ತಿನ ಮಾನ್ಸೂನ್ ಅಧಿವೇಶನ ನಡೆಯುತ್ತಿದ್ದು ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಈ ಅಧಿವೇಶನ ನಡೆಸಲಾಗುತ್ತಿದ್ದು. ಆ ಮೂಲಕ ಇದೇ ಮೊದಲ ಬಾರಿಗೆ ಭಿನ್ನ ರೀತಿಯ ಅಧಿವೇಶನಕ್ಕೆ ಸಂಸತ್ ಸಾಕ್ಷಿಯಾಗಲಿದೆ.
ಈಗಾಗಲೇ ಚಾಲ್ತಿಯಲ್ಲಿರುವ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಮಾನ್ಸೂನ್ ಅಧಿವೇಶನ ನಡೆಸುವುದಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿಳಿಸಿದ್ದಾರೆ. ಇದಕ್ಕಾಗಿ ಉಭಯ ಸದನಗಳ ಕೋಣೆಗಳು ಮತ್ತು ಗ್ಯಾಲರಿಗಳನ್ನು ಸದಸ್ಯರ ಆಸನಕ್ಕಾಗಿ ಬಳಸಿಕೊಳ್ಳುವುದಕ್ಕೂ ನಿರ್ಧರಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಈ ತಿಂಗಳ ಮೂರನೇ ವಾರದೊಳಗಾಗಿ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ವೆಂಕಯ್ಯ ನಾಯ್ಡು ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಕಳೆದ ಎರಡು ವಾರಗಳಿಂದಲೂ ಕೆಲಸ ಮಾಡುತ್ತಿದ್ದಾರೆ.
ಉಭಯ ಸದನಗಳ ಕೊಠಡಿ ಮತ್ತು ಗ್ಯಾಲರಿಗಳಲ್ಲಿ ಸದಸ್ಯರಿಗೆ ಕುಳಿತುಕೊಳ್ಳಲು ಬೇಕಾದ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಕೋಣೆಗಳಲ್ಲಿ 60 ಸದಸ್ಯರು ಮತ್ತು ರಾಜ್ಯಸಭಾ ಗ್ಯಾಲರಿಯಲ್ಲಿ 51 ಸದಸ್ಯರು ಕುಳಿತುಕೊಳ್ಳಲು ಬೇಕಾದ ಪೂರಕ ವ್ಯವಸ್ಥೆ ಮಾಡಲಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮೊದಲ ಸಾಲನ್ನು ಬಿಟ್ಟು ನಂತರದ ಸಾಲುಗಳಲ್ಲಿ ಕುಳಿತುಕೊಳ್ಳಲು ಬೇಕಾದಂತೆ ಸೀಟಿಂಗ್ ಅರೇಂಜ್ಮೆಂಟ್ ಮಾಡಲಾಗುತ್ತಿದೆ.
ಲೋಕಸಭಾ ಕೊಠಡಿಯಲ್ಲಿ ಉಳಿದಂತೆ 132 ಸದಸ್ಯರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಸಂಖ್ಯೆಯ ಆಧಾರದಲ್ಲಿ ವಿವಿಧ ಪಕ್ಷಗಳ ಸದಸ್ಯರಿಗೆ ಇಲ್ಲಿ ವ್ಯವಸ್ಥೆ ಮಾಡಲಾಗುವುದು. ಲೋಕಸಭೆಯ ಎರಡು ಬ್ಲಾಕ್ಗಳಲ್ಲಿ ಆಡಳಿತ ಪಕ್ಷದ ಸದಸ್ಯರು ಮತ್ತು ಇತರರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡಂತೆ ಕುಳಿತುಕೊಳ್ಳಲು ಬೇಕಾದ ಅಗತ್ಯ ವ್ಯವಸ್ಥೆ ಮಾಡುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.