ನವದೆಹಲಿ: ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು ಬೆಳಿಗ್ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಣಿಪುರದ 13 ಹೆದ್ದಾರಿ ಯೋಜನೆಗಳಿಗೆ ಅಡಿಪಾಯ ಹಾಕಿದರು. ಈ ಸಂದರ್ಭದಲ್ಲಿ ಅವರು ಆ ರಾಜ್ಯದಲ್ಲಿ ರಸ್ತೆ ಸುರಕ್ಷತಾ ಯೋಜನೆಯನ್ನು ಉದ್ಘಾಟಿಸಿದರು.
ಹೆದ್ದಾರಿಗಳ ಯೋಜನೆಯಡಿ ರಾಜ್ಯದ 316 ಕಿಲೋಮೀಟರ್ ರಸ್ತೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡಲಾಗುತ್ತದೆ.
ವರ್ಚುವಲ್ ಕಾರ್ಯದಲ್ಲಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ” ಈಶಾನ್ಯ ಪ್ರದೇಶದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಪ್ರಧಾನಿ ಸೂಚನೆ ನೀಡಿದ್ದಾರೆ. ಇಂದಿನ ಯೋಜನೆಯ ಹೊರತಾಗಿ, ಮುಂದಿನ ದಿನಗಳಲ್ಲಿ ಮಣಿಪುರದಲ್ಲಿ ಹೆಚ್ಚಿನ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಕೊಹಿಮಾದಿಂದ ಇಂಫಾಲದವರೆಗಿನ ನಾಲ್ಕು ಪಥದ ರಸ್ತೆಗಳನ್ನು ಅಂದಾಜು ರೂ. 2663 ಕೋಟಿ ರೂ.ವೆಚ್ಚದಲ್ಲಿ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು. ಇದಲ್ಲದೆ, ಜನರ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಉತ್ತಮ ಸಂಪರ್ಕಕ್ಕಾಗಿ ರಾಜ್ಯದಲ್ಲಿ ಇತರ ರಸ್ತೆ ಯೋಜನೆಗಳನ್ನು ಕೈಗೊಳ್ಳಲಾಗುವುದು” ಎಂದಿದ್ದಾರೆ.
ಮಣಿಪುರದಲ್ಲಿ ರಸ್ತೆ ಯೋಜನೆಯ ಭೂ ಸ್ವಾಧೀನದ ನಿಧಾನಗತಿಯ ಪ್ರಗತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಕಳೆದ ಹಲವು ವರ್ಷಗಳಿಂದ ಮಣಿಪುರದಲ್ಲಿ ರಸ್ತೆ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಅಡಚಣೆಗಳಾಗಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಮಣಿಪುರದ ಮುಖ್ಯಮಂತ್ರಿಯನ್ನು ಕೋರಿದರು.
ಪರಿಸರವನ್ನು ಮಾಲಿನ್ಯದಿಂದ ಮುಕ್ತವಾಗಿಸಲು ಈಶಾನ್ಯ ಪ್ರದೇಶದ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ನ ಪರ್ಯಾಯ ಇಂಧನಗಳನ್ನು ಅನ್ವೇಷಿಸಬೇಕು ಎಂದು ಅವರು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಉತ್ತಮ ಭವಿಷ್ಯಕ್ಕಾಗಿ ಈಶಾನ್ಯ ರಾಜ್ಯಗಳಿಗೆ ಯಾವುದೇ ರೀತಿಯ ಸಹಾಯವನ್ನು ನೀಡಲು ಸಿದ್ಧವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.