ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಇದು ಮುಂದಿನ ದಿನಗಳಲ್ಲಿ ದೊಡ್ಡ ಕೈಗಾರಿಕಾ ವಲಯವಾಗಿ ಹೆಸರು ಪಡೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಚಿಂತಾಮಣಿಯಲ್ಲಿ ವಿವಿಧ. ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶೈಕ್ಷಣಿಕ ಮತ್ತು ಆರ್ಥಿಕ ವಿಚಾರಗಳಲ್ಲಿ ಚಿಂತಾಮಣಿಯ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕೆಗಳ ಆರಂಭಕ್ಕಾಗಿ ಪ್ರದೇಶಗಳ ಗುರುತು, ಅನೇಕ ಉದ್ಯಮಗಳ ಆರಂಭಕ್ಕೆ ಸಂಸ್ಥೆಗಳ ಜೊತೆಗೆ ಒಪ್ಪಂದ ಮೊದಲಾದವುಗಳನ್ನು ಈಗಾಗಲೇ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಈ ಭಾಗದ ಸಾವಿರಾರು ಜನರಿಗೆ ಇದು ಉದ್ಯೋಗ ಒದಗಿಸಲಿದೆ ಎಂದು ಅವರು ಹೇಳಿದ್ದಾರೆ.
ಈ ಭಾಗದಲ್ಲಿ ಕೌಶಲ ಆಧಾರಿತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸುವ ಗುರಿ ಇದೆ. ಬೇಡಿಕೆಯ ಕೋರ್ಸ್ಗಳ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗುವುದು. ಏಕೆಂದರೆ ಶಿಕ್ಷಣ ಮುಗಿಸಿದ ಕೂಡಲೇ ಯುವ ಜನರಿಗೆ ಉದ್ಯೋಗ ದೊರೆಯುವಂತಹ ಸ್ಥಿತಿ ನಿರ್ಮಾಣವಾಗಬೇಕಾದರೆ ಇಂತಹ ಶಿಕ್ಷಣದ ಅಗತ್ಯವಿದ್ದು, ಅದಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.