ಲಕ್ನೋ: ಪ್ರತಿಭಟನೆ ಮತ್ತು ಗಲಭೆಗಳನ್ನು ನಡೆಸುವ ಸಂದರ್ಭ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿ ಮಾಡುವ ಘಟನೆಗಳಿಗೆ ಸಂಬಂಧಿಸಿದಂತೆ ತನಿಖೆಯನ್ನು ನಡೆಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ ಸರ್ಕಾರ ಎರಡು ನ್ಯಾಯಮಂಡಳಿಗಳನ್ನು ಸ್ಥಾಪನೆ ಮಾಡಿದೆ. ಒಂದು ಲಕ್ನೋದಲ್ಲಿ ಮತ್ತು ಇನ್ನೊಂದು ಮೀರತ್ನಲ್ಲಿ ನ್ಯಾಯಮಂಡಳಿ ಸ್ಥಾಪನೆಯಾಗಿದೆ.
ಈ ವರ್ಷದ ಮಾರ್ಚ್ ತಿಂಗಳಲ್ಲಿ ಯೋಗಿ ಸರ್ಕಾರವು ‘ಉತ್ತರಪ್ರದೇಶ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ನಷ್ಟ ವಸೂಲಿ ಸುಗ್ರೀವಾಜ್ಞೆ 2020’ ಅನ್ನು ಜಾರಿಗೊಳಿಸಿದೆ. ಇದರ ಅನ್ವಯ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳನ್ನು ನಷ್ಟ ಮಾಡುವ ಜನರಿಂದಲೇ ನಷ್ಟ ವಸೂಲಿ ಮಾಡುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಸಿಎಎ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮಾಡಿದವರಿಂದ ಯೋಗಿ ಸರಕಾರ ಈಗ ವಸೂಲಾತಿ ಮಾಡುತ್ತಿದೆ.
ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂಬ ಆರೋಪದ ಮೇಲೆ ರಾಜ್ಯ ಸರ್ಕಾರ ನೂರಾರು ಜನರ ವಿರುದ್ಧ ಪ್ರಕರಣ ದಾಖಲಿಸಿದೆ. ನಂತರ ಗೃಹ ಇಲಾಖೆಯು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದನೆಂದು ಗುರುತಿಸಲ್ಪಟ್ಟವರ ಛಾಯಾಚಿತ್ರಗಳೊಂದಿಗೆ ಹೋರ್ಡಿಂಗ್ಗಳನ್ನು ಹಾಕಿತು, ಅವರು ಮಾಡಿದ ನಷ್ಟವನ್ನು ಅವರೇ ಭರಿಸುವಂತೆ ಮಾಡಿತು.
ಇದೀಗ ಸ್ಥಾಪನೆಯಾಗಲಿರುವ 2 ನ್ಯಾಯ ಮಂಡಳಿಗಳು ಇಡೀ ರಾಜ್ಯವನ್ನು ಒಳಗೊಳ್ಳಲಿದೆ. ಗಲಭೆಕೋರರು ಉಂಟುಮಾಡುವ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವನ್ನು ಗಲಭೆಕೋರರಿಂದಲೇ ವಶಪಡಿಸಿಕೊಳ್ಳುವ ಉದ್ದೇಶದಿಂದ ಈ ಮಂಡಳಿಗಳನ್ನು ಸ್ಥಾಪನೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.