ನವದೆಹಲಿ: ಕನ್ನಡ ಭಾಷಾ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಸಚಿವ ಸಿ.ಟಿ. ರವಿ ಮನವಿ ಸಲ್ಲಿಸಿದರು.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಜೊತೆಯಲ್ಲಿ ಪೋಖ್ರಿಯಾಲ್ ಅವರನ್ನು ಭೇಟಿ ಮಾಡಿರುವ ಸಿ. ಟಿ. ರವಿ ಪ್ರಸ್ತಾವನೆಗೆ ಅನೂಮೋದನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿ. ಟಿ. ರವಿ, ‘ಕನ್ನಡ ಭಾಷಾ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಮತ್ತು ಚಿಕ್ಕಮಗಳೂರು ಇಂಜಿನಿಯರಿಂಗ್ ಕಾಲೇಜಿಗೆ ಮಂಜೂರಾತಿ ಕೊಡುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಜೊತೆ ಭೇಟಿ ಮಾಡಿ ವಿನಂತಿಸಲಾಯಿತು’ ಎಂದು ಬರೆದುಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನೂ ಭೇಟಿ ಮಾಡಿ ಜನ್ಮ ದಿನದ ಶುಭಾಶಯ ತಿಳಿಸಿದ್ದಾರೆ. ಜೊತೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬರ, ಪ್ರವಾಹ, ರೋಗಗಳು ಹೆಚ್ಚಾಗಿದ್ದು, ಕಾಫಿ ಬೆಳೆಗಾರರು, ಅಡಿಕೆ, ಮೆಣಸು, ಏಲಕ್ಕಿ ಬೆಳೆಗಾರರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ಸಂಬಂಧ ಕೇಂದ್ರ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆಯೂ ಮನವಿ ಮಾಡಿದ್ದಾರೆ.
ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ವಾರ ಕಾಫಿ ಬೆಳೆಗಾರರ ಜೊತೆಗೆ ವೆಬಿನಾರ್ ಮೂಲಕ ಚರ್ಚಿಸಿ ನೆರವು ನೀಡುವ ಭರವಸೆಯನ್ನೂ ನೀಡಿದ್ದಾರೆ.
ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ @DrRPNishank ಅವರನ್ನು ಭೇಟಿಯಾಗಿ, ಕನ್ನಡ ಭಾಷಾ ಅಧ್ಯಯನ ಕೇಂದ್ರಕ್ಕೆ ಸ್ವಾಯತ್ತತೆ ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಹಾಗೂ ರೂಸ ಅಡಿಯಲ್ಲಿ ಚಿಕ್ಕಮಗಳೂರು ಇಂಜಿನಿಯರಿಂಗ್ ಕಾಲೇಜಿಗೆ ಮಂಜೂರಾತಿ ಕೊಡುವಂತೆ ಕೇಂದ್ರ ಸಚಿವರಾದ ಶ್ರೀ @JoshiPralhad ಯವರ ಜೊತೆ ಭೇಟಿ ಮಾಡಿ ವಿನಂತಿಸಲಾಯಿತು.
— C T Ravi 🇮🇳 ಸಿ ಟಿ ರವಿ (@CTRavi_BJP) August 18, 2020
ಈ ಬಗ್ಗೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿದ್ದು ಒಂದು ವಾರದೊಳಗೆ ವೆಬಿನಾರ್ ಮೂಲಕ ಸಂಕಷ್ಟದಲ್ಲಿರುವ ಬೆಳೆಗಾರರ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರ ಘೋಷಣೆಯ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಈ ವೇಳೆ ನನ್ನೊಂದಿಗೆ ಕೇಂದ್ರ ಸಚಿವರಾದ ಶ್ರೀ@JoshiPralhad ಉಪಸ್ಥಿತರಿದ್ದರು. 2/2
— C T Ravi 🇮🇳 ಸಿ ಟಿ ರವಿ (@CTRavi_BJP) August 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.