ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ವಿದೇಶಗಳಲ್ಲಿ ಸಿಲುಕಿರುವ 10,98,000 ಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಾಪಸ್ ಕರೆತರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಂಗಳವಾರ ತಿಳಿಸಿದೆ.
ಟ್ವಿಟ್ ಮಾಡಿರುವ ನಾಗರಿಕ ವಿಮಾನಯಾನ ಸಚಿವಾಲಯ, “ಮೇ 6 ರಿಂದ ಮಿಷನ್ ವಂದೇ ಭಾರತ್ ಅಡಿಯಲ್ಲಿ 10,98,000 ಕ್ಕೂ ಹೆಚ್ಚು ಭಾರತೀಯರನ್ನು ವಾಪಸ್ ಕರೆತರಲಾಗಿದೆ. ಹಲವರ ನಿರಂತರ ಬೆಂಬಲವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ. ಧನ್ಯವಾದಗಳು” ಎಂದಿದೆ.
ವಿಮಾನಯಾನ ಕಾರ್ಯಾಚರಣೆಗಾಗಿ ದ್ವಿಪಕ್ಷೀಯ ಏರ್ ಬಬಲ್ ವ್ಯವಸ್ಥೆಯನ್ನು ಸ್ಥಾಪಿಸಲು ಭಾರತ ಆಸ್ಟ್ರೇಲಿಯಾ, ಇಟಲಿ ಮತ್ತು ಜಪಾನ್ ಸೇರಿದಂತೆ 13 ದೇಶಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಮಾಹಿತಿ ನೀಡಿದರು.
‘ಏರ್ ಬಬಲ್ಸ್’ ವ್ಯವಸ್ಥೆಯು ಉಭಯ ದೇಶಗಳ ವಿಮಾನಯಾನ ಸಂಸ್ಥೆಗಳಿಗೆ ಕೆಲವು ನಿರ್ಬಂಧಗಳೊಂದಿಗೆ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ನಡೆಸಲು ಸಹಾಯ ಮಾಡುತ್ತದೆ.
ಆಸ್ಟ್ರೇಲಿಯಾ, ಇಟಲಿ, ಜಪಾನ್, ನ್ಯೂಜಿಲೆಂಡ್, ನೈಜೀರಿಯಾ, ಬಹ್ರೇನ್, ಇಸ್ರೇಲ್, ಕೀನ್ಯಾ, ಫಿಲಿಪೈನ್ಸ್, ರಷ್ಯಾ, ಸಿಂಗಾಪುರ್, ದಕ್ಷಿಣ ಕೊರಿಯಾ ಮತ್ತು ಥೈಲ್ಯಾಂಡ್ಗಳೊಂದಿಗೆ ʼಏರ್ ಬಬಲ್ʼ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ.
“ನಾವು ವಂದೇ ಭಾರತ್ ಮಿಷನ್ ವ್ಯಾಪ್ತಿಯನ್ನು ಮತ್ತಷ್ಟು ಬಲಪಡಿಸುತ್ತಿದ್ದೇವೆ. ಯುಎಸ್ಎ, ಯುಕೆ, ಫ್ರಾನ್ಸ್, ಜರ್ಮನಿ, ಯುಎಇ, ಕತಾರ್ ಮತ್ತು ಮಾಲ್ಡೀವ್ಸ್ಗಳೊಂದಿಗೆ ವಿಮಾನ ಪ್ರಯಾಣದ ವ್ಯವಸ್ಥೆಗಳು ಈಗಾಗಲೇ ಜಾರಿಯಲ್ಲಿವೆ. ನಾವು ಈಗ ಈ ಪ್ರಯತ್ನಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆ ಮತ್ತು ಅಂತಹ ವ್ಯವಸ್ಥೆಗಳನ್ನು ಸ್ಥಾಪಿಸಲು ಇನ್ನೂ 13 ದೇಶಗಳೊಂದಿಗೆ ಮಾತುಕತೆ ನಡೆಸುತ್ತಿದೆ “ಎಂದು ಪುರಿ ಟ್ವೀಟ್ ಮಾಡಿದ್ದಾರೆ.
Bringing Indians Home!
Over 10,98,000 stranded Indians have been repatriated under Mission #VandeBharat since 6th May. This would not have been possible without the continued support of all stakeholders. Thank you!#IndiaFightsCoronavirus #IndiaFliesHigh #SabUdenSabJuden pic.twitter.com/Z2i3URRCuw
— MoCA_GoI (@MoCA_GoI) August 18, 2020
We continue to further strengthen the reach & scope of VBM. Air Travel arrangements are already in place with USA, UK, France, Germany, UAE, Qatar & Maldives.
We are now taking these efforts forward & are negotiating with 13 more countries to establish such arrangements.
— Hardeep Singh Puri (@HardeepSPuri) August 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.