ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಈ ಕಾಲಘಟ್ಟದಲ್ಲಿ ಮಳೆಗಾಲವೂ ಇರುವುದರಿಂದ ಹೆಚ್ಚು ಮುನ್ನೆಚ್ಚರಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ನಾಗರಿಕರನ್ನು ಕೋರಿದ್ದಾರೆ. ಮಳೆಗಾಲದ ಸಂದರ್ಭದಲ್ಲಿ ಹರಡುವ ರೋಗಗಳು ಈಗ ಹೆಚ್ಚಾಗುತ್ತವೆ, ಈ ಹಿನ್ನೆಲೆಯಲ್ಲಿ ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕಾದ ಸಮಯ ಇದಾಗಿದೆ ಎಂದು ಮೋದಿಯವರು ಟ್ವೀಟ್ನಲ್ಲಿ ತಿಳಿಸಿದ್ದಾರೆ. ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಪೀಡಿತರಿಗೆ ಸಮರ್ಪಕ ಆರೈಕೆಯನ್ನು ಖಾತ್ರಿಪಡಿಸುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ವೆಕ್ಟರ್ನಿಂದ ಹರಡುವ ರೋಗಗಳನ್ನು ಪರೀಕ್ಷಿಸುವ ಸನ್ನದ್ಧತೆ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಅವರು ದೆಹಲಿ ಸರ್ಕಾರಿ ಅಧಿಕಾರಿಗಳು ಮತ್ತು ನಗರದ ಪುರಸಭೆ ಸಂಸ್ಥೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಡೆಂಗ್ಯೂ, ಚಿಕೂನ್ಗುನ್ಯಾ, ಮಲೇರಿಯಾ ಮುಂತಾದ ಕಾಯಿಲೆಗಳನ್ನು ನಿಯಂತ್ರಿಸಲು ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯ ಎಂದು ಅವರು ಹೇಳಿದರು.
ಎಲ್ಲರೂ ಕೋವಿಡ್-19 ರೊಂದಿಗೆ ಹೋರಾಡುವಲ್ಲಿ ನಿರತರಾಗಿರುವುದರಿಂದ ಸಭೆ ನಡೆಸುವುದು ಅಗತ್ಯವಾಗಿತ್ತು ಎಂದು ಡಾ.ಹರ್ಷವರ್ಧನ್ ಹೇಳಿದರು. ವೆಕ್ಟರ್ನಿಂದ ಹರಡುವ ರೋಗಗಳನ್ನು ನಿರ್ಲಕ್ಷಿಸದಂತೆ ಅವರು ಸಲಹೆ ನೀಡಿದರು. ಕಳೆದ ವರ್ಷ ದೆಹಲಿಯಲ್ಲಿ ಸುಮಾರು 5,000 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಮತ್ತು ಅಂತಹ ರೋಗಗಳನ್ನು ಎದುರಿಸಲು ಉತ್ತಮವಾಗಿ ಸಿದ್ಧರಾಗಿರುವುದು ಮುಖ್ಯವಾಗಿದೆ ಎಂದಿದ್ದಾರೆ.
This is the season of tropical and vector-borne diseases.
I urge you all to take the right precautions.
The Government is also closely monitoring the situation and ensuring care to those affected.
Stay safe, be happy! https://t.co/MToG695cXk
— Narendra Modi (@narendramodi) August 18, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.