ನವದೆಹಲಿ: ಈ ವರ್ಷದ ರಾಮೋನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಇಬ್ಬರು ಭಾರತೀಯರು ಬಾಜನರಾಗಿದ್ದಾರೆ.
ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕಾಗಿ ಏಮ್ಸ್ ಅಧಿಕಾರಿ ಸಂಜೀವ್ ಚರ್ತುವೇದಿ ಅವರಿಗೆ ಮತ್ತು ಗೂಂಜ್ ಎಂಬ ಎಜಿಓ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅನ್ಷು ಗುಪ್ತಾ ಅವರಿಗೆ ಪ್ರಶಸ್ತಿ ದೊರೆತಿದೆ.
ಪ್ರಾಮಾಣಿಕರಾಗಿ, ಭ್ರಷ್ಟಚಾರವನ್ನು ಬಯಲಿಗೆಳೆಯುವ ಸಾಹಸವನ್ನು ತೋರಿಸಿದ್ದಕ್ಕಾಗಿ ಚರ್ತುವೇದಿ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಬಡವರ ಉದ್ಧಾರಕ್ಕಾಗಿ ಬಟ್ಟೆ ಉದ್ಯಮವನ್ನು ಆರಂಭಿಸಿ ನಾಯಕತ್ವ ತೋರಿಸಿದ್ದಕ್ಕಾಗಿ, ಮಾನವ ಘನತೆಯನ್ನು ಎತ್ತಿ ಹಿಡಿದಿದ್ದಕ್ಕಾಗಿ ಗುಪ್ತಾ ಅವರಿಗೆ ಪ್ರಶಸ್ತಿ ದೊರೆತಿದೆ.
ಸರ್ಕಾರಿ ಸೇವೆ, ಸಾರ್ವಜನಿಕ ಸೇವೆ, ಸಾಹಿತ್ಯ, ಪತ್ರಿಕೋದ್ಯಮ, ಶಾಂತಿ ಮುಂತಾದ ವಲಯದಲ್ಲಿ ಅತ್ಯಮೂಲ್ಯ ಕೊಡುಗೆ ನೀಡಿದವರಿಗೆ ಮ್ಯಾಗ್ಸೆಸೆ ಪ್ರಶಸ್ತಿಯನ್ನು ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.