ನವದೆಹಲಿ: ನಿರಂತರ, ಪೂರ್ವಭಾವಿ ಮತ್ತು ಸಮಯೋಚಿತ ಕ್ರಮಗಳಿಂದಾಗಿ ದೇಶದಲ್ಲಿ ಇದುವರೆಗೆ ಎರಡು ದಶಲಕ್ಷಕ್ಕೂ ಹೆಚ್ಚು ಜನರು ಕೋವಿಡ್-19 ನಿಂದ ಯಶಸ್ವಿಯಾಗಿ ಚೇತರಿಸಿಕೊಂಡಿದ್ದಾರೆ. ಚೇತರಿಕೆ ದರವು ನಿರಂತರವಾಗಿ ಏರುಗತಿಯಲ್ಲಿ ಇದೆ ಮತ್ತು ಇಂದಿನಂತೆ ದೇಶದಲ್ಲಿ ಚೇತರಿಕಾ ಪ್ರಮಾಣ ಶೇಕಡಾ 73.64 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ಭಾರತವು 60 ಸಾವಿರಕ್ಕೂ ಹೆಚ್ಚು ಚೇತರಿಕೆಗಳನ್ನು ನೋಂದಾಯಿಸಿದೆ, ಇದು ಒಂದೇ ದಿನದಲ್ಲಿ ಕೋವಿಡ್-19 ನಿಂದ ಅತೀ ಹೆಚ್ಚು ಚೇತರಿಕೆ ಆಗಿದೆ. ಈವರೆಗೆ ದೇಶದಲ್ಲಿ ಒಟ್ಟು 20 ಲಕ್ಷ 37 ಸಾವಿರ 870 ಜನರು ಚೇತರಿಸಿಕೊಂಡಿದ್ದಾರೆ. ಪ್ರಕರಣದ ಸಾವಿನ ಪ್ರಮಾಣವು ಸ್ಥಿರವಾದ ಕುಸಿತವನ್ನು ತೋರಿಸುತ್ತಲೇ ಇದೆ ಮತ್ತು ಈಗ ಅದು ಶೇಕಡಾ 1.91 ರಷ್ಟಿದೆ. ದೇಶದ ಸುಮಾರು 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಸಾವಿನ ಪ್ರಮಾಣವನ್ನು ಹೊಂದಿವೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸುಮಾರು 64 ಸಾವಿರ ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು ಪ್ರಕರಣಗಳ ಸಂಖ್ಯೆಯನ್ನು 27 ಲಕ್ಷ 67 ಸಾವಿರ 274 ಕ್ಕೆ ತೆಗೆದುಕೊಂಡು ಹೋಗಿದೆ. ಪಾಸಿಟಿವ್ ಪ್ರಮಾಣವೂ ಸ್ಥಿರ ಕುಸಿತಕ್ಕೆ ಸಾಕ್ಷಿಯಾಗಿದೆ ಮತ್ತು ಈಗ ನಿಂತಿದೆ ಕೋವಿಡ್ ಗಾಗಿ ಪರೀಕ್ಷಿಸಲಾದ ಒಟ್ಟು ಮಾದರಿಗಳಲ್ಲಿ ಶೇಕಡಾ 7.72 ರಷ್ಟು ಪಾಸಿಟಿವ್ ದಾಖಲಾಗುತ್ತದೆ. ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಆರು ಲಕ್ಷ 76 ಸಾವಿರ 514 ಆಗಿದೆ.
ಒಂದೇ ದಿನದಲ್ಲಿ, 1 ಸಾವಿರ 92 ಸಾವುಗಳು ಸಂಭವಿಸಿದೆ. ಇದು ಸಾವಿನ ಪ್ರಕರಣವನ್ನು 52, 889 ಕ್ಕೆ ತಲುಪಿಸಿದೆ ಎಂದು ವರದಿಯಾಗಿದೆ.
ಭಾರತವು ತನ್ನ ಕೋವಿಡ್ ಪರೀಕ್ಷಾ ಸಾಮರ್ಥ್ಯವನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಯಿತು. ‘ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್’ ತಂತ್ರವನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.