ಶ್ರೀನಗರ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಿಂದ ಸುಮಾರು 10,000 ಅರೆಸೈನಿಕ ಸಿಬ್ಬಂದಿಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೇಂದ್ರ ಬುಧವಾರ ಆದೇಶಿಸಿದೆ. ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹೆಚ್ಚುವರಿ ಸೈನಿಕರನ್ನು ಅಲ್ಲಿ ನಿಯೋಜನೆ ಮಾಡಲಾಗಿತ್ತು. ಇದೀಗ ಅಲ್ಲಿಂದ ಹೆಚ್ಚುವರಿ ಪಡೆಗಳನ್ನು ಹಿಂಪಡೆಯಲಾಗುತ್ತಿದೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್)ಗಳನ್ನು ಕೇಂದ್ರಾಡಳಿತ ಪ್ರದೇಶದಲ್ಲಿ ನಿಯೋಜಿಸಿರುವುದನ್ನು ಪರಿಶೀಲಿಸಿದ ಬಳಿಕ ಗೃಹ ಸಚಿವಾಲಯ ಹಿಂಪಡೆಯುವ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಒಟ್ಟು 100 ಸಿಎಪಿಎಫ್ ಕಂಪನಿಗಳನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಆದೇಶಿಸಲಾಗಿದೆ ಮತ್ತು ಅವುಗಳನ್ನು ತಮ್ಮ ಮೂಲ ಸ್ಥಳಗಳಿಗೆ ಮರಳಲು ತಿಳಿಸಲಾಗಿದೆ.
ನಿರ್ದೇಶನಗಳ ಪ್ರಕಾರ, ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಒಟ್ಟು 40 ಕಂಪನಿಗಳು ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್), ಗಡಿ ಭದ್ರತಾ ಪಡೆ (ಬಿಎಸ್ಎಫ್) ಮತ್ತು ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ)ದ ತಲಾ 20 ಕಂಪನಿಗಳು ಈ ವಾರದಲ್ಲಿ ಜಮ್ಮು ಮತ್ತು ಕಾಶ್ಮೀರದಿಂದ ಹಿಂತೆಗೆಯಲಾಗಿದೆ. ಸಿಎಪಿಎಫ್ ಕಂಪನಿಯು ಸುಮಾರು 100 ಸಿಬ್ಬಂದಿಗಳ ಕಾರ್ಯಾಚರಣಾ ಸಾಮರ್ಥ್ಯವನ್ನು ಹೊಂದಿದೆ.
ಗೃಹ ಸಚಿವಾಲಯವು ಕೊನೆಯ ಬಾರಿಗೆ 10 ಸಿಎಪಿಎಫ್ ಕಂಪನಿಗಳನ್ನು ಜಮ್ಮು-ಕಾಶ್ಮೀರದಿಂದ ಮೇ ತಿಂಗಳಲ್ಲಿ ಹಿಂತೆಗೆದುಕೊಂಡಿದ್ದರೆ, ಅಂತಹ 72 ಘಟಕಗಳನ್ನು ಕಳೆದ ವರ್ಷ ಡಿಸೆಂಬರ್ನಲ್ಲಿ ಹಿಂತೆಗೆಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.