ಕೋಲ್ಕತಾ: ಪಶ್ಚಿಮಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ಜನರು ಕರೆ ಮಾಡಿ ನೋಂದಾಯಿಸಿಕೊಳ್ಳಬಹುದಾದ ಟೋಲ್ ಫ್ರೀ ಸಂಖ್ಯೆಯನ್ನು ಬಿಜೆಪಿಯ ಪಶ್ಚಿಮ ಬಂಗಾಳ ಘಟಕ ಬುಧವಾರ ಬಿಡುಗಡೆ ಮಾಡಿದೆ.
ರಾಜ್ಯದ 2021 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು “ದುರ್ನಿತಿರ್ ಬಿರುಧೆ (ಭ್ರಷ್ಟಾಚಾರದ ವಿರುದ್ಧ)” ಎಂದು ಹೆಸರಿಸಲ್ಪಟ್ಟ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ.
“ಟಿಎಂಸಿ ನಡೆಸುತ್ತಿರುವ ದೊಡ್ಡ ಪ್ರಮಾಣದ ಭ್ರಷ್ಟಾಚಾರದಿಂದಾಗಿ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಟಿಎಂಸಿ ಸರ್ಕಾರ ಅಥವಾ ಟಿಎಂಸಿ ನಾಯಕರ ವಿರುದ್ಧ ಭ್ರಷ್ಟಾಚಾರದ ಬಗ್ಗೆ ದೂರು ಇರುವವರು ನಮ್ಮ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ಅವರ ಕುಂದುಕೊರತೆಗಳನ್ನು ನೋಂದಾಯಿಸಿಕೊಳ್ಳಬಹುದು” ಎಂದು ಘೋಷ್ ಸುದ್ದಿಗಾರರಿಗೆ ತಿಳಿದ್ದಾರೆ.
ಈ ದೂರುಗಳನ್ನು ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದರು. ಸಂಖ್ಯೆ 7044070440ಗೆ ಜನರು ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದಿದ್ದಾರೆ.
ಕಳೆದ ತಿಂಗಳು ನವದೆಹಲಿಯಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಟೋಲ್ ಫ್ರೀ ಸಂಖ್ಯೆಯನ್ನು ಪ್ರಾರಂಭಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು ಮತ್ತು ರಾಜ್ಯ ವಿಧಾನಸಭಾ ಚುನಾವಣೆಯ ತಂತ್ರಗಳನ್ನು ಚರ್ಚಿಸಲಾಯಿತು.
ಮೇ ಮಧ್ಯದಲ್ಲಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ್ದ ಆಂಫಾನ್ ಚಂಡಮಾರುತದಲ್ಲಿ ಮನೆಗಳು ಹಾನಿಗೊಳಗಾದವರಿಗೆ ವಿತ್ತೀಯ ಪರಿಹಾರವನ್ನು ವಿತರಿಸುವುದರಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಆರೋಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.