ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 24 ಗಂಟೆಗಳ ಅವಧಿಯಲ್ಲಿ ನಾಲ್ಕು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಇದರಲ್ಲಿ ಒಟ್ಟು ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ನಾಲ್ಕು ಜನರನ್ನು ಬಂಧಿಸಲಾಗಿದೆ ಮತ್ತು ಅಪಾರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಲಾಗಿದೆ.
ಇತ್ತೀಚಿನ ಕಾರ್ಯಾಚರಣೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಹಂಡ್ವಾರಾ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ನಡೆದ ಸಂದರ್ಭದಲ್ಲಿ ಇಬ್ಬರು ಲಷ್ಕರ್-ಎ-ತೋಯ್ಬಾ (ಎಲ್ಇಟಿ) ಭಯೋತ್ಪಾದಕರು ನಿನ್ನೆ ಸಂಜೆ ಸಾವನ್ನಪ್ಪಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಎಲ್ಇಟಿ ಕಮಾಂಡರ್ ನಾಸೀರ್-ಯು-ದಿನ್ ಲೋನ್ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುತಿಸಿದ್ದಾರೆ. ಪೊಲೀಸ್ ದಾಖಲೆಗಳ ಪ್ರಕಾರ, ಏಪ್ರಿಲ್ 18 ರಂದು ಸೊಪೋರ್ನಲ್ಲಿ ಮೂರು ಸಿಆರ್ಪಿಎಫ್ ಯೋಧರನ್ನು ಮತ್ತು ಮೇ 4 ರಂದು ಹಂಡ್ವಾರಾದಲ್ಲಿ ಮೂರು ಸಿಆರ್ಪಿಎಫ್ ಯೋಧರನ್ನು ಈತ ಹತ್ಯೆ ಮಾಡಿದ್ದಾನೆ.
ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ಅವರು, “18/4/20 ರಂದು ಈತ ಸೊಪೋರ್ನಲ್ಲಿ 3 ಸಿಆರ್ಪಿಎಫ್ ಯೋಧರನ್ನು ಮತ್ತು 4/5/20 ರಂದು ಹ್ಯಾಂಡ್ವಾರಾದಲ್ಲಿ 3 ಸಿಆರ್ಪಿಎಫ್ ಯೋಧರನ್ನು ಹತ್ಯೆಗೈದ ಎಲ್ಇಟಿ ಕಮಾಂಡರ್ ನಾಸೀರ್-ಯು-ದಿನ್ ಲೋನ್ ಕೊಲ್ಲಲ್ಪಟ್ಟಿದ್ದಾನೆ” ಎಂದಿದ್ದಾರೆ.
ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು,, “2 ಅಪರಿಚಿತ ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ. ಶೋಧ ನಡೆಯುತ್ತಿದೆ. ಹ್ಯಾಂಡ್ವಾರಾದ ಗಣಿಪೋರಾ ಕ್ರಾಲ್ಗುಂಡ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಿರತವಾಗಿವೆ. ಹೆಚ್ಚಿನ ವಿವರಗಳನ್ನು ಅನುಸರಿಸಬೇಕಿದೆ” ಎಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.