ನವದೆಹಲಿ: ಕಬ್ಬು ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸಲು ಮುಂದಾಗಿರುವ ಕೇಂದ್ರ ಸರ್ಕಾರ ಬೆಳೆಗೆ ನ್ಯಾಯೋಚಿತ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದ್ದು ಆ ಮೂಲಕ ರೈತರಲ್ಲಿ ಉತ್ಸಾಹ ಮೂಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗ ಮಾಡಿರುವ ಶಿಫಾರಸ್ಸಿನ ಅನ್ವಯ ಈ ಬೆಂಬಲ ಬೆಲೆ ನೀಡಲಾಗಿದೆ. 2020-21ರ ಸೆಪ್ಟೆಂಬರ್, ಅಕ್ಟೋಬರ್ನಲ್ಲಿ ಸಕ್ಕರೆ ಮಂಡಿಗಳು ಪಾವತಿ ಮಾಡಬೇಕಾಗಿರುವ ಕಬ್ಬಿನ ದರಕ್ಕೆ ಅನುಮೋದನೆ ನೀಡಲಾಗಿದೆ. 2020-21ರ ಸಕ್ಕರೆ ಋತುವಿನಲ್ಲಿ ಕಬ್ಬಿನ ಎಫ್.ಆರ್.ಪಿ ಯು ಶೇ 10%ರಷ್ಟು ಮೂಲ ರಿಕವರಿ ದರಕ್ಕೆ ಪ್ರತಿ ಕ್ವಿಂಟಲ್ ಗೆ 285 ರೂ, ಎಫ್,ಆರ್.ಪಿ, ರಿಕವರಿ 9.5% ಅಥವಾ ಅದಕ್ಕಿಂತ ಕಡಿಮೆ ಇರುವ ಕಾರ್ಖಾನೆಗಳಿಗೆ ಎಫ್.ಆರ್.ಪಿ ಪ್ರತಿ ಕ್ವಿಂಟಲ್ ಗೆ 270.75 ರೂ ನಿಗದಿ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.