ನವದೆಹಲಿ: ದೇಶದ ಮೂರು ವಿಮಾನ ನಿಲ್ದಾಣಗಳ ನಿರ್ವಹಣೆಯ ಜವಾಬ್ದಾರಿಯನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಸ್ತಾವನೆಯೊಂದಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದೆ.
ಕೇರಳದ ತಿರುವನಂತಪುರ, ಅಸ್ಸಾಂನ ಗುವಾಹಟಿ, ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣಗಳನ್ನು ಮುಂದಿನ 50 ವರ್ಷಗಳ ಅವಧಿಗೆ ನಿರ್ವಹಣೆಗಾಗಿ ಅದಾನಿ ಎಂಟರ್ರ್ಪ್ರೈಸಸ್ಗೆ ಗುತ್ತಿಗೆ ನೀಡಲಾಗಿದೆ. ಎರಡನೇ ಹಂತದಲ್ಲಿ ಇದೀಗ ಮತ್ತೆ ಅಧಾನಿ ಸಂಸ್ಥೆಗೆ ಈ ಮೂರು ವಿಮಾನ ನಿಲ್ದಾಣಗಳ ಗುತ್ತಿಗೆಯನ್ನೂ ನೀಡಲಾಗಿದೆ.
ಕಳೆದ ವರ್ಷದಲ್ಲಿ ಮಂಗಳೂರು, ಲಕ್ನೋ, ಅಹಮದಾಬಾದ್ ನಲ್ಲಿರುವ ವಿಮಾನ ನಿಲ್ದಾಣಗಳ ನಿರ್ವಹಣೆಯ ಗುತ್ತಿಗೆಯನ್ನು ಅದಾನಿ ಕಂಪೆನಿಗೆ ನೀಡಿ ಕೇಂದ್ರ ಸರ್ಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿತ್ತು. ಇದೀಗ ಎರಡನೇ ಬಾರಿಗೆ ಮತ್ತೆ ಮೂರು ಸಂಸ್ಥೆಗಳ ನಿರ್ವಹಣೆಯ ಹೊಣೆಯನ್ನೂ ಖಾಸಗಿ ಸಂಸ್ಥೆಗೆ ಕೇಂದ್ರ ಸರ್ಕಾರ ನೀಡಿದೆ.
ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿನ 30-35 ವಿಮಾನ ನಿಲ್ದಾಣಗಳ ನಿರ್ವಹಣಾ ಜವಾಬ್ದಾರಿಯನ್ನು ಖಾಸಗಿಯವರಿಗೆ ನೀಡಲಾಗುವುದು ಎಂದೂ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಮುಂದಿನ ವರ್ಷದಲ್ಲಿ ಭುವನೇಶ್ವರ, ವಾರಣಾಸಿ, ತಿರುಚ್ಚಿ, ಇಂದೋರ್ ಮತ್ತು ರಾಯಪುರ ವಿಮಾನ ನಿಲ್ದಾಣಗಳನ್ನು ಖಾಸಗಿ ಸಂಸ್ಥೆಯ ನಿರ್ವಹಣೆಗೆ ಒಪ್ಪಿಸಲಾಗುವುದು ಎಂದು ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.