ಲಕ್ನೋ: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಬಹುಕೋಟಿ ಜನರ ಕನಸು ರಾಮ ಮಂದಿರವನ್ನು ಕೇವಲ ಕಲ್ಲುಗಳನ್ನಷ್ಟೇ ಬಳಸಿ ನಿರ್ಮಾಣ ಮಾಡಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಈ ಮಂದಿರವು ಸಾವಿರಾರು ವರ್ಷಗಳ ಕಾಲ ಬಾಳಿಕೆ ಬರಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಕಲ್ಲುಗಳನ್ನು ಬಳಸಿ ಮಂದಿರ ಕಟ್ಟಲಾಗುತ್ತದೆ ಎಂದು ಹೇಳಿದ್ದಾರೆ. ಐಐಟಿ ಮದ್ರಾಸ್ ಮತ್ತು ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ ಗಳು ಈ ಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಲಿವೆ ಎಂಬುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ದೇವಾಲಯ ನಿರ್ಮಾಣ ವಿಚಾರವನ್ನು ಟೌಬ್ರೋ ಮತ್ತು ಲಾರ್ಸೆನ್ ನೋಡಿಕೊಳ್ಳಲಿದ್ದು, ಐಐಟಿ ಮಣ್ಣಿನ ಬಲಿಷ್ಠತೆಯ ಪರೀಕ್ಷೆ ಹಾಗೂ ಸಿಬಿಆರ್ ಕಟ್ಟಡ ಭೂಕಂಪನದಿಂದಲೂ ಯಾವುದೇ ಹಾನಿಯಾಗದಂತೆ ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆಯೇ ಎಂಬುದರ ಪರೀಕ್ಷೆ ನಡೆಸಿದೆ.
ಜೊತೆಗೆ ಮಂದಿರ ನಿರ್ಮಾಣದಲ್ಲಿ 10 ಸಾವಿರ ತಾಮ್ರದ ಸಲಾಕೆಗಳನ್ನು ಬಳಕೆ ಮಾಡಲಾಗುತ್ತದೆ. ಈ ಸಲಾಕೆಯನ್ನು ಕೊಡುಗೆ ನೀಡಲು ಬಯಸುವವರು ಅದಕ್ಕೆ ಪ್ರತಿಯಾಗಿ ದೇವಾಲಯ ನಿರ್ಮಾಣ ಕಾರ್ಯಕ್ಕೆ ಧನ ಸಹಾಯ ನೀಡುವ ಮೂಲಕ ಮಂದಿರ ನಿರ್ಮಾಣ ಕಾರ್ಯದಲ್ಲಿ ಕೈ ಜೋಡಿಸಿ ಪುನೀತರಾಗಬಹುದೆಂದೂ ಚಂಪತ್ ರಾಯ್ ಹೇಳಿದ್ದಾರೆ.
ಈ ಸಂಬಂಧ ಟ್ರಸ್ಟ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿಯೂ ಮಾಹಿತಿ ನೀಡಲಾಗಿದ್ದು, ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯಗಳು ಆರಂಭವಾಗಿದೆ. ಸಿಆರ್ಬಿಐ ರೂರ್ಕಿಯ ಎಂಜಿನಿಯರ್ಗಳು, ಐಐಟಿ ಮದ್ರಾಸ್ ಸಂಸ್ಥೆಗಳು ಎಲ್ ಆಂಡ್ ಟಿ ಜೊತೆಗೂಡಿ ಮಂದಿರ ನಿರ್ಮಾಣದಲ್ಲಿ ಬಳಸುವ ಮಣ್ಣಿನ ಗುಣಮಟ್ಟದ ಪರೀಕ್ಷೆ ನಡೆಸುತ್ತಿವೆ. 36-40 ತಿಂಗಳುಗಳಲ್ಲಿ ಈ ನಿರ್ಮಾಣ ಕಾರ್ಯ ಸಂಪೂರ್ಣವಾಗಲಿದೆ ಎಂದು ಹೇಳಿದೆ.
The construction of Shri Ram Janmbhoomi Mandir has begun. Engineers from CBRI Roorkee, IIT Madras along with L&T are now testing the soil at the mandir site. The construction work is expected to finish in 36-40 months.
— Shri Ram Janmbhoomi Teerth Kshetra (@ShriRamTeerth) August 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.