ನವದೆಹಲಿ: ಭಾರತೀಯ ಕ್ರಿಕೆಟ್ ರಂಗದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ಬಳಿಕ ಇದೀಗ ಸುರೇಶ್ ರೈನಾ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಸ್ವೀಕರಿಸಿದ ಶ್ಲಾಘನಾ ಪತ್ರವನ್ನು ಟ್ವಿಟರ್ ಮೂಲಕ ಹಂಚಿಕೊಂಡು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 15ರಂದು ಧೋನಿಯವರ ಜೊತೆಗೆಯೇ ರೈನಾ ಅವರು ಕೂಡ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ 16 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿಯನ್ನು ಕೊನೆಗೊಳಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅವರು ಆಟವನ್ನು ಮುಂದುವರೆಸಲಿದ್ದಾರೆ. ಐಪಿಎಲ್ನಲ್ಲಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಆಡಲಿದ್ದಾರೆ.
ಮೋದಿ ಬರೆದ ಪತ್ರವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅವರು, “ನಾವು ಆಡುವಾಗ, ನಾವು ರಾಷ್ಟ್ರಕ್ಕಾಗಿ ನಮ್ಮ ರಕ್ತ ಮತ್ತು ಬೆವರನ್ನು ನೀಡುತ್ತೇವೆ. ಈ ದೇಶದ ಜನರಿಂದ ಮತ್ತು ದೇಶದ ಪ್ರಧಾನ ಮಂತ್ರಿಯಿಂದ ಪ್ರೀತಿಸಲ್ಪಟ್ಟಿರುವುದಕ್ಕಿಂತ ಉತ್ತಮವಾದ ಮೆಚ್ಚುಗೆ ಮತ್ತೊಂದಿಲ್ಲ. ನಿಮ್ಮ ಮೆಚ್ಚುಗೆಯ ಮಾತುಗಳಿಗೆ ಮತ್ತು ಶುಭಾಶಯಗಳಿಗೆ ಧನ್ಯವಾದಗಳು. ಕೃತಜ್ಞತೆಯಿಂದ ಅದನ್ನು ಸ್ವೀಕರಿಸಿದೆ. ಜೈ ಹಿಂದ್!” ಎಂದಿದ್ದಾರೆ.
ಪಿಎಂ ಮೋದಿ ಅವರು ತಮ್ಮ ಆತ್ಮೀಯ ಮೆಚ್ಚುಗೆಯ ಪತ್ರದಲ್ಲಿ, ಸುರೇಶ್ ರೈನಾ ಅವರ ಜೀವನದ 2 ನೇ ಇನ್ನಿಂಗ್ಸ್ಗೆ ಅತ್ಯುತ್ತಮವಾದುದನ್ನು ಹಾರೈಸಿದ್ದಾರೆ. 33 ವರ್ಷದ ರೈನಾ ಅವರು ಭಾರತದ 74 ನೇ ಸ್ವಾತಂತ್ರ್ಯ ದಿನಾಚರಣೆಯಂದು ನಿವೃತ್ತಿ ಘೋಷಣೆ ಮಾಡಿದಾಗ ಕ್ರಿಕೆಟ್ ಅಭಿಮಾನಿಗಳು ತೀರ ನಿರಾಸೆಗೊಂಡರೂ, ರೈನಾ ಅವರ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.
When we play, we give our blood & sweat for the nation. No better appreciation than being loved by the people of this country and even more by the country’s PM. Thank you @narendramodi ji for your words of appreciation & best wishes. I accept them with gratitude. Jai Hind!🇮🇳 pic.twitter.com/l0DIeQSFh5
— Suresh Raina🇮🇳 (@ImRaina) August 21, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.