ಮೈಸೂರು: ಮೈಸೂರಿನ ಕೆಆರ್ಎಸ್ ನಲ್ಲಿ ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೈಸೂರಿನ ನಾಡ ಹಬ್ಬವೆಂದೇ ಪ್ರಸಿದ್ಧಿ ಪಡೆದಿರುವ ನಾಡಹಬ್ಬ ದಸರಾ ಆಚರಣೆಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭವಾದ ಈ ವೇಳೆಯಲ್ಲಿಯೂ ನಾಡ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ನಡೆಯಲಿರುವ ಹಬ್ಬಗಳ ರೂಪುರೇಶೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ದಸರಾ ಹಬ್ಬ ನಡೆಸುವುದರ ಸಲುವಾಗಿ ಚರ್ಚೆ ನಡೆಸಲು ಉನ್ನತ ಮಟ್ಟದ ಸಭೆಯೊಂದನ್ನು ನಡೆಸಲಾಗುವುದು. ಈ ಸಭೆಯ ದಿನವನ್ನು ನಿಗದಿಪಡಿಸಿ ಶೀಘ್ರದಲ್ಲೇ ತಿಳಿಸುವುದಾಗಿಯೂ ಮುಖ್ಯಮಂತ್ರಿ ತಿಳಿಸಿದ್ದಾರೆ. ಜೊತೆಗೆ ಕಾವೇರಿಗೆ ಐದನೇ ಬಾರಿ ಬಾಗಿನ ಸಮರ್ಪಣೆ ಮಾಡಿರುವ ಖುಷಿಯನ್ನೂ ಅವರು ಹಂಚಿಕೊಂಡಿದ್ದು, ಈ ಬಾರಿ ಉತ್ತಮ ಮಳೆಯಾಗಿದ್ದು, ಅಂತರ್ಜಲ ಕುಸಿತದ ಸಮಸ್ಯೆ ಪರಿಹಾರವಾಗಲಿದೆ ಎಂದು ಹೇಳಿದ್ದಾರೆ. ವರ್ಷಂಪ್ರತಿ ಉತ್ತಮ ರೀತಿಯಲ್ಲಿ ಮಳೆಯಾಗಿ ನೀರಿನ ಸಮಸ್ಯೆಗೆ ಮುಕ್ತಿ ಸಿಗುವಂತಾಗಲಿ ಎಂದೂ ಅವರು ಆಶಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.