ಬೆಂಗಳೂರು: ಹೊಸ ಹೊಸ ಕೃಷಿ ಸಂಬಂಧಿತ ತಂತ್ರಜ್ಞಾನಗಳು ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬಲ್ಲವು. ಹಾಗೆಯೇ ಕೃಷಿ ಕ್ಷೇತ್ರದತ್ತ ಚಿತ್ತ ಹರಿಸುವ ಯುವ ರೈತರಿಗೂ ಹೊಸ ಅವಕಾಶಗಳನ್ನು ಸೃಷ್ಟಿಸಿ ಕೊಡಬಲ್ಲದು ಎಂದು ಸಚಿವ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.
ಅವರು ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕೃಷಿ ನವೋದ್ಯಮ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತದ ಚುಕ್ಕಾಣಿ ಹಿಡಿದ ಬಳಿಕ ತಂತ್ರಜ್ಞಾನ ಬೆಳೆದಿದೆ. ಸ್ಟಾರ್ಟ್-ಅಪ್ಗಳ ಯುಗ ಆರಂಭವಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್-ಅಪ್ಗಳನ್ನು ಪರಿಚಯಿಸಿ ರೈತರು ಮತ್ತು ಗ್ರಾಹಕರ ನಡುವೆ ಸಂಪರ್ಕ ಕಲ್ಪಿಸಲು ಸೂಕ್ತ ವೇದಿಕೆಯನ್ನು ಪರಿಚಯಿಸಲಾಗಿರುವುದಾಗಿಯೂ ಅವರು ಹೇಳಿದ್ದಾರೆ.
ದೇಶಕ್ಕೆ ಸಂಬಂಧಿಸಿದಂತೆ ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳು ಈಗಾಗಲೇ ಆರಂಭಿಕ ನೀತಿಯನ್ನು ಹೊರತಂದಿವೆ. ಬೆಂಗಳೂರಿನಲ್ಲಿ 4 ಸಾವಿರ ಸ್ಟಾರ್ಟ್-ಅಪ್ ಗಳನ್ನು ಆರಂಭಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆಗಳನ್ನು ನಡೆಸಿದೆ. ಇವುಗಳು ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುವ ದೆಸೆಯಿಂದಲೂ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನವೋದ್ಯಮ ಆರಂಭಿಕ ಹಂತದಲ್ಲಿಯೇ ಹೆಚ್ಚು ಜನರಿಗೆ ಆಪ್ತವಾಗಿವೆ. ಪ್ರತಿ ನಿತ್ಯ ದೇಶದಲ್ಲಿ 2-3 ಸ್ಟಾರ್ಟ್-ಅಪ್ಗಳು ಜೀವ ಪಡೆಯುತ್ತಿದೆ. ದೇಶದಲ್ಲಿ ಅಗ್ರಿ ಸ್ಟಾರ್ಟ್-ಅಪ್ಗಳಿಂದ 4.5 ಬಿಲಿಯನ್ ಡಾಲರ್ ಮಾರುಕಟ್ಟೆಯ ನಿರ್ಮಾಣ ಸಾಧ್ಯವಾಗಲಿರುವುದಾಗಿ ಆಕ್ಸೆಂಚರ್ ನಡೆಸಿದ ಸಮೀಕ್ಷೆಯ ಮೂಲಕ ತಿಳಿದು ಬಂದಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.
ಆತ್ಮನಿರ್ಭರ ಭಾರತದ ಹಿನ್ನೆಲೆಯಲ್ಲಿಯೂ ಕೃಷಿ ಸ್ಟಾರ್ಟ್-ಅಪ್ಗಳು ಪ್ರಮುಖ ಪಾತ್ರ ವಹಿಸಲಿವೆ. ರಾಜ್ಯದಲ್ಲಿ ಕೃಷಿಕರ ಸಹಾಯಕ್ಕೆಂದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹೊಸ ಹೊಸ ಯೋಜನೆಗಳನ್ನು ಆರಂಭ ಮಾಡಲಾಗುವುದಾಗಿಯೂ ಸಚಿವರು ತಿಳಿಸಿದ್ದಾರೆ. ಅಲ್ಲದೆ ಉದ್ಯಮಿಗಳಿಗೆ ಕೃಷಿ ನವೋದ್ಯಮ ವೇದಿಕೆ ಆರಂಭ ಮಾಡಿರುವುದಕ್ಕೂ ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.