ನವದೆಹಲಿ: ಕೊರೋನಾ ದೇಶಕ್ಕೆ ಕಾಲಿಟ್ಟ ಆರಂಭದ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಪಡೆದಿದ್ದ ತಬ್ಲಿಘಿ ಜಮಾತ್ ಮತ್ತು ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ ಕಂಡಾಲ್ವಿ ವಿರುದ್ಧ ದಾಖಲಾಗಿರುವ ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಲವು ನಗರಗಳಲ್ಲಿ ಪರಿಶೀಲನೆ ನಡೆಸಿದೆ.
ದೆಹಲಿ, ಹೈದರಾಬಾದ್, ಮುಂಬೈ ಸೇರಿದಂತೆ ದೇಶದ ಇನ್ನೂ ಹಲವು ನಗರಗಳಲ್ಲಿ ಇಡಿ ತನಿಖೆ ನಡೆಸಿದೆ. ಈ ಸಂಬಂಧ ದೆಹಲಿ ಪೊಲೀಸರು ದಾಖಲಿಸಿಕೊಂಡಿರುವ ದೂರನ್ನು ಪರಿಶೀಲಿಸಿ ಇಡಿ ಮೌಲಾನ ಸಾದ್ ಮತ್ತು ಇತರ ವ್ಯಕ್ತಿಗಳ ಮೇಲೆ, ಜಮಾತ್ನ ಟ್ರಸ್ಟ್ನ ಮೇಲೆ ಕೇಸು ದಾಖಲಿಸಿಕೊಂಡಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ತೆಗೆದುಕೊಳ್ಳುತ್ತಿರುವುದಾಗಿಯೂ ಇಡಿ ಮಾಹಿತಿ ನೀಡಿದೆ.
ಕೊರೋನಾ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ತಬ್ಲಿಘಿ ಜಮಾತ್ ಸಭೆ ನಡೆಸಿದ್ದು, ಇದರಲ್ಲಿ ದೇಶ ವಿದೇಶಗಳ ಹಲವಾರು ಜನರು ಭಾಗವಹಿಸಿದ್ದರು. ಈ ಕಾರಣಕ್ಕಾಗಿ ದೆಹಲಿಯ ನಿಜಾಮುದ್ದೀನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ದೆಹಲಿಯ ಪೊಲೀಸ್ ಅಪರಾಧ ವಿಭಾಗಕ್ಕೆ ದೂರು ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಮಾರ್ಚ್ 31 ಕ್ಕೆ ಎಫ್ಐಆರ್ ದಾಖಲಿಸಲಾಗಿತ್ತು. ಸದ್ಯ ಈ ಪ್ರಕರಣವನ್ನು ಇಡಿ ಕೈಗೆತ್ತಿಕೊಂಡಿದ್ದು ತನಿಖೆ ನಡೆಸುತ್ತಿದೆ. ದೂರು ದಾಖಲಾಗಿರುವ ಆರೋಪಿಗಳ ಹಣದ ಮೂಲ, ಅಕ್ರಮ ಹಣ ವರ್ಗಾವಣೆ ಮೊದಲಾದ ವಿಚಾರಗಳ ಬಗ್ಗೆಯೂ ಕೂಲಂಕುಶ ತನಿಖೆ ನಡೆಸುತ್ತಿದೆ. ದೇಶೀಯ ಮತ್ತು ವಿದೇಶೀ ದೇಣಿಗೆಗಳ ಬಗೆಗೂ ತನಿಖೆ ನಡೆಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.