ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಭಾರತದ ಮಾಜಿ ಹಣಕಾಸು ಸಚಿವ ದಿವಂಗತ ಅರುಣ್ ಜೇಟ್ಲಿ ಅವರ ಮೊದಲ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದೆ. 2019 ರ ಆಗಸ್ಟ್ 24 ರಂದು ಅವರು ನಿಧನರಾದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಸಂದರ್ಭದಲ್ಲಿ ಅಗಲಿದ ನಾಯಕನಿಗೆ ಗೌರವ ಸಲ್ಲಿಸಿದರು.
ತನ್ನ ಸ್ನೇಹಿತನನ್ನು ನೆನಪಿಸಿಕೊಂಡ ಪಿಎಂ ಮೋದಿ ಅವರು, ”ಕಳೆದ ವರ್ಷ ಈ ದಿನ ನಾವು ಅರುಣ್ ಜೇಟ್ಲಿ ಅವರನ್ನು ಕಳೆದುಕೊಂಡೆವು. ನಾನು ನನ್ನ ಸ್ನೇಹಿತನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅರುಣ್ ಜಿ ಶ್ರದ್ಧೆಯಿಂದ ಭಾರತಕ್ಕೆ ಸೇವೆ ಸಲ್ಲಿಸಿದರು. ಅವರ ಜ್ಞಾನ, ಬುದ್ಧಿಶಕ್ತಿ, ಕಾನೂನು ಪರಿಣತಿ ಮತ್ತು ವ್ಯಕ್ತಿತ್ವ ಲೆಜೆಂಡರಿಯಾಗಿದೆ. ಅವರ ನೆನಪಿನಲ್ಲಿ ಅವರ ಪ್ರಾರ್ಥನಾ ಸಭೆಯಲ್ಲಿ ನಾನು ಹೇಳಿದ ಮಾತು ಇಲ್ಲಿದೆ” ಎಂದು ಮೋದಿ ಅರುಣ್ ಜೇಟ್ಲಿಯವರ ಪ್ರಾರ್ಥನಾ ಸಭೆಯಲ್ಲಿ ತಾವು ಮಾಡಿದ ಭಾಷಣದ ವೀಡಿಯೊವನ್ನು ಹಂಚಿಕೊಂಡಿದ್ದಾರೆ.
‘ ಅರುಣ್ ಜೇಟ್ಲಿ , ಒಬ್ಬ ಅತ್ಯುತ್ತಮ ರಾಜಕಾರಣಿ, ಸಮೃದ್ಧ ವಾಗ್ಮಿ ಮತ್ತು ಭಾರತೀಯ ರಾಜಕೀಯದಲ್ಲಿ ಯಾವುದೇ ಸಮಾನಾಂತರಗಳಿಲ್ಲದ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರು ಬಹುಮುಖಿ ಮತ್ತು ಸ್ನೇಹಿತರ ಸ್ನೇಹಿತರಾಗಿದ್ದರು, ಅವರ ಅತ್ಯುನ್ನತ ಪರಂಪರೆ, ಪರಿವರ್ತಕ ದೃಷ್ಟಿ ಮತ್ತು ರಾಷ್ಟ್ರದ ಮೇಲಿನ ಭಕ್ತಿಗಾಗಿ ಸದಾ ಸ್ಮರಣೀಯರು” ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ವಿ ಕೆ ಸಿಂಗ್, ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಮುಂತಾದ ಹಲವಾರು ರಾಜಕಾರಣಿಗಳು ನಾಯಕನಿಗೆ ಗೌರವ ಸಲ್ಲಿಸಿದರು.
ವಿ ಕೆ ಸಿಂಗ್ ಟ್ವಿಟ್ ಮಾಡಿ, ” ಬಹುಮುಖ ರಾಜಕಾರಣಿಗಳಲ್ಲಿ ಒಬ್ಬರಾದ ಅರುಣ್ ಜೇಟ್ಲಿಅವರನ್ನು ನೆನಪಿಸಿಕೊಳ್ಳುತ್ತೇವೆ. ಒಬ್ಬ ಅಸಾಧಾರಣ ವಾಗ್ಮಿ, ವಕೀಲ, ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದವರು. ಅವರ ಕೊಡುಗೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ” ಎಂದಿದ್ದಾರೆ.
ಅರುಣ್ ಜೇಟ್ಲಿ ಅವರು 1999 ರಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಸೇವೆ ಸಲ್ಲಿಸಿದರು. 2000-04ರ ನಡುವೆ ಅವರು ಕೇಂದ್ರ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿದರು.
On this day, last year, we lost Shri Arun Jaitley Ji. I miss my friend a lot.
Arun Ji diligently served India. His wit, intellect, legal acumen and warm personality were legendary.
Here is what I had said during a prayer meeting in his memory. https://t.co/oTcSeyssRk
— Narendra Modi (@narendramodi) August 24, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.