ನವದೆಹಲಿ: ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯ ಪಿಡುಗನ್ನು ಕೊನೆಗೊಳಿಸುವ ಪ್ರಯತ್ನದ ಭಾಗವಾಗಿ, ವಿಶ್ವ ಹಿಂದೂ ಪರಿಷತ್ ಸುಮಾರು 5,000 ದಲಿತರಿಗೆ ದೇಶಾದ್ಯಂತ ಅರ್ಚಕರಾಗಿ ತರಬೇತಿಯನ್ನು ನೀಡುತ್ತಿದ್ದು, ಈ ಕಾರ್ಯದಲ್ಲಿ ಯಶಸ್ವಿಯಾಗಿದೆ ಎಂದು ವಿಎಚ್ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿಯನ್ನು ನೀಡಿರುವ ಅವರು, ವಿಎಚ್ಪಿ ಸಂಘಟನೆಯ ಪ್ರಯತ್ನದಿಂದಾಗಿ, ಇಂತಹ ಅನೇಕ ಪುರೋಹಿತರು ಸರ್ಕಾರ ನಡೆಸುತ್ತಿರುವ ದೇವಾಲಯಗಳ ಮಂಡಳಿಗಳಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದಿದ್ದಾರೆ.
“ನಾವು ದಕ್ಷಿಣ ಭಾರತದಲ್ಲಿ ಭಾರಿ ಯಶಸ್ಸನ್ನು ಸಾಧಿಸಿದ್ದೇವೆ. ದಕ್ಷಿಣ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ದಲಿತ ಪುರೋಹಿತರಿದ್ದಾರೆ. ವಿಎಚ್ಪಿಯ ಪ್ರಯತ್ನದಿಂದಾಗಿ ತಮಿಳುನಾಡಿನಲ್ಲಿ 2,500 ಪುರೋಹಿತರಿಗೆ ತರಬೇತಿ ನೀಡಲಾಗಿದೆ. ಆಂಧ್ರಪ್ರದೇಶದಲ್ಲೂ ಹೆಚ್ಚಿನ ಸಂಖ್ಯೆಯ ದಲಿತ ಪುರೋಹಿತರಿದ್ದಾರೆ. ಇದುವರೆಗೆ 5,000 ದಲಿತ ಪುರೋಹಿತರಿಗೆ ತರಬೇತಿ ನೀಡುವಲ್ಲಿ ವಿಎಚ್ಪಿ ಭಾರಿ ಯಶಸ್ಸನ್ನು ಗಳಿಸಿದೆ “ಎಂದು ಅವರು ಹೇಳಿದ್ದಾರೆ.
ವಿಎಚ್ಪಿಯ ಎರಡು ಅಂಗಗಳು ಈ ಕಾರ್ಯದಲ್ಲಿ ಭಾಗಿಯಾಗಿವೆ, ಧಾರ್ಮಿಕ ವಿಷಯಗಳಲ್ಲಿ ಆಸಕ್ತಿ ಹೊಂದಿರುವ ದಲಿತರಿಗೆ ವಿವಿಧ ಧಾರ್ಮಿಕ ಆಚರಣೆಗಳನ್ನು ನಡೆಸುವ ತರಬೇತಿಯನ್ನು ಖಾತ್ರಿಪಡಿಸಲಾಗುತ್ತಿದೆ. ತರಬೇತಿಯ ಕೊನೆಯಲ್ಲಿ ಅವರಿಗೆ ಪ್ರಮಾಣಪತ್ರಗಳನ್ನು ಸಹ ನೀಡಲಾಗುತ್ತದೆ. ವಿವಿಧ ಧಾರ್ಮಿಕ ಸಮಾರಂಭಗಳು ಮತ್ತು ಆಚರಣೆಗಳನ್ನು ನಿರ್ವಹಿಸುವಲ್ಲಿ ಪ್ರವೀಣರಾದ ಪುರೋಹಿತರಿಗೆ ತಿರುಮಲ ತಿರುಪತಿ ದೇವಸ್ತಾನಂ (ಟಿಟಿಡಿ) ಯಿಂದ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.
ವಿಎಚ್ಪಿ ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಕೆಲಸ ಮಾಡುತ್ತಲೇ ಬಂದಿದೆ ಎಂದು ವಿನೋದ್ ಬನ್ಸಾಲ್ ಮಾಹಿತಿ ನೀಡಿದ್ದಾರೆ. ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಹಾಯ ಮಾಡುವ ನಿರ್ಣಯವನ್ನು 1969 ರಲ್ಲಿ ಕರ್ನಾಟಕದ ಉಡುಪಿಯಲ್ಲಿ ನಡೆದ ವಿಎಚ್ಪಿ ಸಮಾವೇಶದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.