ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿನ ಪರಿಸ್ಥಿತಿ ಅವಲೋಕನಕ್ಕಾಗಿ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗೆ ಭೇಟೌ ನೀಡಲಿದ್ದು, ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಕೃಷ್ಣಾ ನದಿಯ ತೀರದಲ್ಲಿರುವ ಪ್ರದೇಶಗಳು, ಘಟಪ್ರಭಾ, ಮಲಪ್ರಭಾ, ದೂದ್ ಸಾಗರ್, ಮರಕಂಡೇಯ, ವೇದ ಗಂಗಾ ನದಿಗಳ ಪ್ರದೇಶಗಳಲ್ಲಿಯೂ ಈ ಬಾರಿ ಭಾರೀ ಮಳೆ ಸುರಿದಿದ್ದು, ಹಲವಾರು ಕಡೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದಾಗಿ ಬಾಗಲಕೋಟೆ, ಧಾರಾವಾಡ, ಗದಗ, ಬೆಳಗಾವಿ, ವಿಜಯಪುರಗಳಲ್ಲಿನ ಜನರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಗ್ರಾಮಗಳು, ಹೆದ್ದಾರಿಗಳಲ್ಲಿನ ಮೂಲಭೂತ ಸೌಕರ್ಯಗಳಿಗೂ ಹಾನಿಯಾಗಿದೆ. ಜೊತೆಗೆ ರೈತರ ಕೃಷಿ ಭೂಮಿಯೂ ಹಾನಿಗೀಡಾಗಿದ್ದು, ಈ ಸಂಬಂಧ ಪರಿಶೀಲನೆ ನಡೆಸಲು ಯಡಿಯೂರಪ್ಪ ಉತ್ತರ ಕರ್ನಾಟಕ ಭೇಟಿ ಮಾಡಲಿದ್ದಾರೆ.
ಒಂದು ಕಡೆಯಿಂದ ಪ್ರವಾಹದಿಂದಾದ ನಷ್ಟ ಸಂಕಷ್ಟವಾದರೆ, ಇನ್ನೊಂದು ಕಡೆಯಿಂದ ಕೊರೋನಾ ಸಂಕಷ್ಟವೂ ಜನರನ್ನು ಕಂಗೆಡಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಕೆಲವು ಸಚಿವರ ಜೊತೆಗೆ ಈ ಭಾಗದಲ್ಲಿ ಒಂದು ದಿನದ ವೈಮಾನಿಕ ಸಮೀಕ್ಷೆ ನಡೆಸಿ, ಕ್ರಮ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.