ನವದೆಹಲಿ: ಕೋಟ್ಯಂತರ ಭಕ್ತರಿಗೆ ಚಾರ್ಧಾಮ್ ಯಾತ್ರೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಮಹತ್ವದ ಯೋಜನೆಯೊಂದಕ್ಕೆ ಕೈ ಹಾಕಿದೆ ಎಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಉತ್ತರಾಖಂಡದ ಗಂಗೋತ್ರಿ, ಯಮುನೋತ್ರಿ, ಬದ್ರೀನಾಥ, ಕೇದಾರನಾಥ ಯಾತ್ರೆಯನ್ನು ಯಾತ್ರಿಗಳಿಗೆ ಸರಳಗೊಳಿಸುವ ಸಲುವಾಗಿ 327 ಕಿ.ಮೀ. ಉದ್ದ ರೈಲ್ವೆ ಮಾರ್ಗ ನಿರ್ಮಾಣ ಯೋಜನೆಯನ್ನು ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಕಾರ್ಯವನ್ನು ನಡೆಸಲು ಮುಂದಾಗಿರುವುದಾಗಿಯೂ ಗೋಯಲ್ ಮಾಹಿತಿ ನೀಡಿದ್ದಾರೆ.
ಈ ರೈಲು ಮಾರ್ಗ ನಿರ್ಮಾಣ ಯೋಜನೆಯು ಗುಡ್ಡಗಾಡು ಪ್ರದೇಶಗಳ ನಡುವೆಯೂ ಹಾದು ಹೋಗಲಿದೆ. ಜೊತೆಗೆ ಅನೇಕ ಸುರಂಗ ಮಾರ್ಗಗಳನ್ನು ನಿರ್ಮಾಣ ಮಾಡುವ ಮೂಲಕ ರೈಲು ಮಾರ್ಗ ನಿರ್ಮಿಸಿ ಚಾರ್ಧಾಮ್ ಯಾತ್ರೆಗೆ ರೈಲು ಸಂಚಾರ ಕಲ್ಪಿಸಲಾಗುವುದಾಗಿಯೂ ಅವರು ಹೇಳಿದ್ದಾರೆ.
ಈ ಹೊಸ ಯೋಜನೆಯು ಗಂಗೋತ್ರಿ, ಯಮುನೋತ್ರಿ ಯನ್ನು ಸಂಪರ್ಕ ಮಾಡಲಿದ್ದು, ಶೀಘ್ರದಲ್ಲೇ ಬದ್ರೀನಾಥ ಮತ್ತು ಕೇದಾರನಾಥ ಸಂಪರ್ಕಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಹೇಳಿದ್ದಾರೆ. ಆ ಮೂಲಕ ಯಾತ್ರಿಕರಿಗೆ ಆರಾಮದಾಯಕ ಯಾತ್ರೆಗೆ ಅವಕಾಶ ಮಾಡಿಕೊಡುವುದಾಗಿಯೂ ಗೋಯಲ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.