ನವದೆಹಲಿ: ದೆಹಲಿಯಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿಯ ದೆಹಲಿ ಘಟಕ ಬೃಹತ್ ಆಂದೋಲನವನ್ನು ಆಯೋಜಿಸಿದೆ. ಈ ಆಂದೋಲನದಲ್ಲಿ ಭಾಗಿಯಾಗುವಂತೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ ಗುಪ್ತ ಅವರು ಪತ್ರ ಬರೆದು ಮನವಿ ಮಾಡಿದ್ದಾರೆ.
ಆಮ್ ಆದ್ಮಿ ಪಕ್ಷವು ರಾಜಕೀಯ ಪವಿತ್ರತೆಯನ್ನು ಹಾಳುಮಾಡಿದೆ. ಫೆಬ್ರವರಿ ತಿಂಗಳಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರವನ್ನು ಎಎಪಿ ಪಕ್ಷವು ಆಯೋಜನೆ ಮಾಡಿದೆ. ಹಿಂಸಾಚಾರದಲ್ಲಿ 53 ಜನರು ಪ್ರಾಣ ಕಳೆದುಕೊಂಡಿದ್ದಾರೆ. 200 ಮಂದಿ ಗಾಯಗೊಂಡಿದ್ದಾರೆ” ಎಂದು ಆರೋಪಿಸಿ ಬಿಜೆಪಿಯು ಅಣ್ಣಾ ಹಜಾರೆ ಅವರಿಗೆ ಪತ್ರ ಬರೆದಿದೆ.
ಸ್ವಚ್ಛ ಮತ್ತು ಪರಿಶುದ್ಧ ರಾಜಕೀಯವನ್ನು ನಡೆಸುವ ಭರವಸೆ ನೀಡಿ ಆಮ್ ಆದ್ಮಿ ಪಕ್ಷ ದೆಹಲಿ ಗದ್ದುಗೆಯನ್ನು ಏರಿತ್ತು. ಆದರೆ ಅದು ರಾಜಕೀಯ ಪರಿಶುದ್ಧತೆಯನ್ನು ಹಾಳುಮಾಡಿದೆ. ಎಎಪಿ ಪಕ್ಷದ ಕೋಮು ಗಲಭೆಗಳ ಪರಿಣಾಮವಾಗಿ ಜನರು ಬೇಸತ್ತು ಹೋಗಿದ್ದಾರೆ” ಎಂದು ಬಿಜೆಪಿ ಆರೋಪಿಸಿದೆ.
“ಆಮ್ ಆದ್ಮಿ ಪಕ್ಷ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರಾಗಿದೆ. ನಾವು ಆ ಪಕ್ಷದ ವಿರುದ್ಧ ನಿರಂತರವಾಗಿ ಹೋರಾಟ ನಡೆಸುತ್ತಲೇ ಬಂದಿದ್ದೇವೆ. ಆ ಪಕ್ಷದ ವಿರುದ್ಧ ನಾವು ಬೃಹತ್ ಆಂದೋಲನವನ್ನು ನಡೆಸುತ್ತಿದ್ದು, ಅದರಲ್ಲಿ ಕೈಜೋಡಿಸಬೇಕು” ಎಂದು ಬಿಜೆಪಿ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.