ತಿರುವನಂತಪುರ: ಕೇರಳದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಮತ್ತು ಕಾರ್ಯಾಚರಣೆಯ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆ ಅದಾನಿ ಎಂಟರ್ಪ್ರೈಸಸ್ಗೆ ನೀಡಬಾರದು ಎಂದು ಕೇರಳದ ವಿಧಾನಸಭೆ ಸರ್ವಾನುಮತದ ನಿರ್ಣಯವನ್ನು ಅಂಗೀಕಾರ ಮಾಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಮಾನ ನಿಲ್ದಾಣ ನಿರ್ವಹಣೆಯ ಜವಾಬ್ದಾರಿಯನ್ನು ಅದಾನಿ ಸಂಸ್ಥೆಗೆ ವಹಿಸುವ ನಿರ್ಣಯವನ್ನು ಕೇಂದ್ರ ಮರುಪರಿಶೀಲನೆ ನಡೆಸಬೇಕು ಎಂದು ಹೇಳಿದರು. ಕೇರಳ ಸರ್ಕಾರದ ಹೆಚ್ಚಿನ ಪಾಲನ್ನು ಹೊಂದಿರುವ ಸ್ಪೆಷಲ್ ಪರ್ಪಸ್ ವೆಹಿಕಲ್ ಕಂಪೆನಿಗೆ ಈ ಜವಾಬ್ದಾರಿ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.
ವಿಮಾನ ನಿಲ್ದಾಣವನ್ನು ಖಾಸಗೀಕರಣ ಪ್ರಕ್ರಿಯೆಗೆ ಒಳಪಡಿಸುವ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುತ್ತದೆ. 2019 ರ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಸರ್ಕಾರಿ ಸ್ವಾಮ್ಯದ ಕೆಎಸ್ಐಡಿಸಿ ವಿಮಾನ ನಿಲ್ದಾಣದ ಮುಕ್ತ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರೂ, ಅದಾನಿ ಕಂಪೆನಿ ಹೆಚ್ಚು ಹೂಡಿಕೆ ಮಾಡುವ ಮೂಲಕ ಈ ಪ್ರಕ್ರಿಯೆಯನ್ನು ತನ್ನದಾಗಿಸಿಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.