ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ)ದ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಅವರ ಅಧಿಕಾರವಧಿಯನ್ನು ಕೇಂದ್ರ ಸರ್ಕಾರ ಇನ್ನೂ 2 ವರ್ಷಗಳ ಕಾಲ ವಿಸ್ತರಿಸಿದೆ. ಈ ಬಗ್ಗೆ ಸೋಮವಾರ ಆದೇಶ ಹೊರಡಿಸಲಾಗಿದೆ.
ಸಚಿವ ಸಂಪುಟದ ನೇಮಕಾತಿ ಮಂಡಳಿಯು ಸತೀಶ್ ರೆಡ್ಡಿ ಅವರನ್ನು ಡಿಆರ್ಡಿಒ ಅಧ್ಯಕ್ಷರು ಹಾಗೂ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ಮುಂದಿನ ಎರಡು ವರ್ಷಗಳು ಮುಂದುವರಿಸಲು ಅನುಮೋದನೆ ನೀಡಿದೆ.
2018ರ ಆಗಸ್ಟ್ನಲ್ಲಿ ಸತೀಶ್ ರೆಡ್ಡಿ ಅವರನ್ನು ಎರಡು ವರ್ಷಗಳ ಅವಧಿಗೆ ಡಿಆರ್ಡಿಒ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಇನ್ನೂ ಎರಡು ವರ್ಷಗಳ ಕಾಲ ಅವರು ಜವಾಬ್ದಾರಿಯಲ್ಲಿ ಮುಂದುವರೆಯಲಿದ್ದಾರೆ.
ಆಂಧ್ರ ಪ್ರದೇಶ ಮೂಲದ ಸತೀಶ್ ರೆಡ್ಡಿ ಅವರು, ಅನಂತಪುರದ ಜವಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ (ಜೆಎನ್ಟಿಯು) ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹೈದರಾಬಾದ್ ಜೆಎನ್ಟಿಯುದಿಂದ ಎಂ.ಎಸ್ ಮತ್ತು ಪಿಎಚ್.ಡಿ ಪಡೆದಿದ್ದಾರೆ.
ಮಾಜಿ ರಾಷ್ಟ್ರಪತಿ, ಶ್ರೇಷ್ಠ ವಿಜ್ಞಾನಿ ಡಾ. ಅಬ್ದುಲ್ ಕಲಾಂ ಅವರ ಕನಸಿನ ಕೂಸಾದ ರಕ್ಷಣಾ ಸಂಶೋಧನಾ ಸಂಸ್ಥೆ ‘ರಿಸರ್ಚ್ ಸೆಂಟರ್ ಇಮಾನತ್’ನಲ್ಲಿ ವಿಜ್ಞಾನಿಯಾಗಿ ವೃತ್ತಿಜೀವನ ಆರಂಭಿಸಿದ ಇವರು, 2015ರ ಮೇನಲ್ಲಿ ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ನೇಮಕಗೊಂಡರು.
ಡಿಆರ್ಡಿಓದ ಹಲವು ಯಶಸ್ವಿ ಯೋಜನೆಗಳಲ್ಲಿ ಸತೀಶ್ ಅವರ ಕೊಡುಗೆ ಸಾಕಷ್ಟಿದೆ. ಅವರನ್ನು ಡಿಆರ್ಡಿಓದ ಯಶಸ್ವಿ ಮುಖ್ಯಸ್ಥ ಎಂದು ಬಣ್ಣಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.