ನವದೆಹಲಿ: ವಿಶ್ವ ಮಟ್ಟದಲ್ಲಿ ಉಗ್ರಗಾಮಿಗಳ ತವರು ಎಂದೇ ಕುಖ್ಯಾತಿ ಪಡೆದಿರುವ ಪಾಕಿಸ್ಥಾನಕ್ಕೆ, ಆ ದೇಶದಲ್ಲಿ ಇರುವ ದಾವೂದ್ ಇಬ್ರಾಹಿಂ ಸೇರಿದಂತೆ, ಉಗ್ರರ ಗುಂಪುಗಳು ಮತ್ತು ಅವುಗಳ ನಾಯಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತ ಆಗ್ರಹಿಸಿದೆ.
ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ನ ಕಪ್ಪು ಪಟ್ಟಿಗೆ ಸೇರಿಕೊಳ್ಳದಂತೆ ತಪ್ಪಿಸಿಕೊಳ್ಳಲು ಪಾಕಿಸ್ಥಾನ ಭಯೋತ್ಪಾದನೆ, ಭಯೋತ್ಪಾದಕರ ವಿಚಾರವಾಗಿ ತಪ್ಪು ಮಾಹಿತಿ ನೀಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕರಾಚಿಯಲ್ಲಿ ಮುಂಬೈ ದಾಳಿಯ ಕಿಂಗ್ ಪಿನ್ ದಾವೂದ್ ಇರುವುದಾಗಿ ಒಪ್ಪಿಕೊಂಡಿದ್ದ ಪಾಕಿಸ್ಥಾನ, ಈಗ ಮತ್ತೆ ಈ ಹೇಳಿಕೆಯಿಂದ ಹಿಂದೆ ಸರಿದಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯಗಳ ವಕ್ತಾರ ಅನುರಾಗ್ ಶ್ರೀ ವಾಸ್ತವ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪಾಕಿಸ್ಥಾನ ತನ್ನ ದೇಶದ ಯಾವ ಪ್ರದೇಶದಲ್ಲಿ ಯಾವ ಉಗ್ರಗಾಮಿ ಸಂಘಟನೆ, ಉಗ್ರರು ನೆಲೆಯೂರಿದ್ದಾರೆ ಎಂದು ಪಟ್ಟಿಯನ್ನು ಸಿದ್ಧಪಡಿಸಿದೆ. ಈ ಪಟ್ಟಿಯಲ್ಲಿ ತಿಳಿಸಿರುವ ವ್ಯಕ್ತಿಗಳ ಮೇಲೆ ಯಾವ ಕ್ರಮ ಕೈಗೊಳ್ಳಲ್ಲಿದೆ ಎಂಬುದನ್ನು ನೋಡಲು ಪ್ರಪಂಚ ಕಾಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ಎನ್ಐಎ ಸಲ್ಲಿಸಿರುವ ತನಿಖಾ ವರದಿಯನ್ನು ಉಲ್ಲೇಕಿಸಿರುವ ಶ್ರೀ ವಾಸ್ತವ ಅವರು, ಇದರಲ್ಲಿಯೂ ಪಾಕಿಸ್ಥಾನದ ಉಗ್ರರ ಪಟ್ಟಿ ಇದೆ. ಭಾರತ ಪಾಕಿಸ್ಥಾನದಲ್ಲಿ ಉಗ್ರರಿದ್ದಾರೆ ಎಂಬುದಕ್ಕೆ ಪೂರಕ ಸಾಕ್ಷಿ ನೀಡುತ್ತಿದ್ದರೂ, ಅಂತಹ ಉಗ್ರರಿಗೆ ಶಿಕ್ಷೆ ನೀಡುವ ಬದಲು ಅವರನ್ನು ಪ್ರೋತ್ಸಾಹ ಮಾಡುವ, ಬೆಳೆಸುವ ನಿಟ್ಟಿನಲ್ಲಿ ಪಾಕಿಸ್ಥಾನ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.