ನವದೆಹಲಿ: ಹೆಚ್ಚುತ್ತಿರುವ ಜನಸಂಖ್ಯೆಯನ್ನು ತಡೆಯಲು ಕಾನೂನು ತರಬೇಕು ಮತ್ತು ದೇಶದಲ್ಲಿ ಸಾಮಾನ್ಯ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಅಖಿಲ ಭಾರತೀಯ ಅಖಾರ ಪರಿಷದ್ (ಎಬಿಎಪಿ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಎಬಿಎಪಿ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮಾತನಾಡಿ, ಜನಸಂಖ್ಯೆಯನ್ನು ತಡೆಯಲು ಎರಡು ಮಕ್ಕಳ ಕಾನೂನು ಜಾರಿಗೊಳಿಸುವ ಅಗತ್ಯವಿದೆ. ಒಂದು ನಿರ್ದಿಷ್ಟ ಸಮುದಾಯವು ಅಲ್ಪಸಂಖ್ಯಾತ ಸ್ಥಾನಮಾನವನ್ನು ಹೊಂದಿದೆ, ಆದರೆ ಅದು ಬಹುಸಂಖ್ಯಾತ ಸಮುದಾಯವನ್ನು ದೌರ್ಜನ್ಯಕ್ಕೀಡು ಮಾಡುತ್ತಿದೆ ಎಂದು ಮಹಂತ್ ಹೇಳಿದರು.
ಸೋಷಿಯಲ್ ಮೀಡಿಯಾದಲ್ಲಿ ಹಿಂದೂ ದೇವತೆಗಳಿಗೆ ಅಶ್ಲೀಲ ಮತ್ತು ನಿಂದನೀಯ ಟೀಕೆಗಳನ್ನು ಬಳಸಿದ ಇನ್ನೊಂದು ಸಮುದಾಯದ ಯುವತಿಯನ್ನು ಪ್ರಯಾಗ್ರಾಜ್ನಲ್ಲಿ ಬಂಧಿಸಿರುವ ಪ್ರಕರಣವನ್ನು ಅವರು ಉಲ್ಲೇಖಿಸಿದ್ದಾರೆ.
“ಅಯೋಧ್ಯೆಯಲ್ಲಿ ರಾಮ ದೇವಾಲಯವನ್ನು ನಿರ್ಮಿಸುವ ಮೊದಲೇ ಕೆಲವರು ಅದನ್ನು ಕೆಡವುವ ಬಗ್ಗೆ ಮಾತನಾಡಿದ್ದಾರೆ. ಅವರು ಸನಾತನ ಸಂಸ್ಕೃತಿಗೆ ಸವಾಲು ಹಾಕುತ್ತಿದ್ದಾರೆ” ಎಂದು ಮಹಂತ್ ಹೇಳಿದರು.
ದೇಶದಲ್ಲಿ ಈ ಸಮುದಾಯದ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಮುಂದಿನ ದಿನಗಳಲ್ಲಿ ದೊಡ್ಡ ಅಪಾಯವಾಗಬಹುದು ಎಂದು ಅವರು ಹೇಳಿದರು.
ಬುದ್ಧಿಜೀವಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಜನಸಂಖ್ಯೆ ನಿಯಂತ್ರಣ ಕ್ರಮಗಳನ್ನು ಅಳವಡಿಸಿಕೊಳ್ಳಲು ತಮ್ಮ ಜನರನ್ನು ಮನವೊಲಿಸಬೇಕು ಮತ್ತು ಸನಾತನ ಧರ್ಮದ ಅನುಯಾಯಿಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಹೇಳಿಕೆಗಳನ್ನು ನೀಡುವುದನ್ನು ತಡೆಯುವಂತೆ ಬುದ್ಧಿ ಹೇಳಬೇಕು ಎಂದು ಅವರು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.