ಬೆಂಗಳೂರು: ಮಹಾನ್ ಸಂತರಲ್ಲಿ ಒಬ್ಬರಾದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಲೋಕ ಕಲ್ಯಾಣಾರ್ಥವಾಗಿ ಮಾಡಿರುವ ಸೇವೆ ಅವಿಸ್ಮರಣೀಯ. ಕೊರೋನಾ ಸಂದರ್ಭದಲ್ಲಿ ವರ್ಚುವಲ್ ಸಭೆಯ ಮೂಲಕವಾದರೂ ಅವರ 105 ನೇ ಜಯಂತಿಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆದುಕೊಳ್ಳುವ ಅವಕಾಶ ಸಿಕ್ಕಿರುವುದು ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಇಂದು ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಾಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಆಯೋಜಿಸಿರುವ ಶ್ರೀಮನ್ಮಹಾರಾಜ ರಾಜಗುರುತಿಲಕ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105 ನೆಯ ಜಯಂತಿ ಮಹೋತ್ಸವ ವರ್ಚುವಲ್ ಸಮಾರಂಭದಲ್ಲಿ ತಮ್ಮ ಗೃಹ ಕಛೇರಿಯಿಂದಲೇ ಭಾಗವಹಿಸಿ ಅವರು ಮಾತನಾಡಿದರು.
ಜಗದ್ಗುರುಗಳು ಮಹಾನ್ ಯೋಗಿಗಳು, ಸಂತರು. ಅವರು ತಮ್ಮ ಬದುಕನ್ನು ಜನರ ಉದ್ಧಾರಕ್ಕಾಗಿ ಮುಡಿಪಾಗಿಟ್ಟವರು ಎಂದು ತಿಳಿಸಿದ್ದಾರೆ. ಆಹಾರ, ಅರಿವು, ಸಮಾಜ ಸುಧಾರಣೆ, ಆರೋಗ್ಯ, ಧರ್ಮಜಾಗೃತಿ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಜೆ.ಎಸ್.ಎಸ್. ಮಹಾ ವಿದ್ಯಾಪೀಠದ ಮೂಲಕ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ವಸತಿ, ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದು ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಶ್ರೀ ಗಳು ಶಾಂತಿ, ಧಾರ್ಮಿಕ ಸಾಮರಸ್ಯದ ರುವಾರಿಯೂ ಆಗಿದ್ದು ಅವರ ಬದುಕು ಎಲ್ಲರಿಗೂ ಸ್ಫೂರ್ತಿ ಎಂದು ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಜಯಂತಿಯ ಪ್ರಯುಕ್ತ ಶ್ರೀ ಮಠ ಅನೇಕ ಜನಾನುರಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕ ಕಾಳಜಿ ವ್ಯಕ್ತಪಡಿಸಿದ್ದು, ಇಂತಹ ಸಮಾಜಮುಖಿ ಕಾರ್ಯಗಳು ಮತ್ತಷ್ಟು ನಡೆಯುವಂತಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.
ಕಾರ್ಯಕ್ರಮದಲ್ಲಿ ಶ್ರೀಗಳ ಜೀವನ ಮೌಲ್ಯಗಳು ಹಾಗೂ ಶ್ರೀಮಠದ ಸಾಧನೆಗಳನ್ನು ಬಿಂಬಿಸುವ ಕೃತಿಗಳು ಹಾಗೂ ಆನಿಮೇಷನ್ ಚಿತ್ರಗಳನ್ನು ಬಿಡುಗಡೆ ಮಾಡಲಾಯಿತು.
ಮುಖ್ಯಮಂತ್ರಿ ಶ್ರೀ @BSYBJP ರವರು ಇಂದು ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಠದ ವತಿಯಿಂದ ಆಯೋಜಿಸಲಾಗಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105ನೇ ಜಯಂತಿ ಮಹೋತ್ಸವದ ಡಿಜಿಟಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ‘ಸುತ್ತೂರು ಶ್ರೀ ಮಠ – ಗುರು ಪರಂಪರೆ’ ಪುಸ್ತಕವನ್ನು ಬಿಡುಗಡೆ ಮಾಡಿದರು. (1/2) pic.twitter.com/Js8wALFf12
— CM of Karnataka (@CMofKarnataka) August 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.