ನವದೆಹಲಿ: ರಾಜ್ಯದ ಮೂವರು ಶಿಕ್ಷಕರು ಸೇರಿದಂತೆ ದೇಶದ ಒಟ್ಟು 47 ಶಿಕ್ಷಕರನ್ನು ‘ರಾಷ್ಟ್ರೀಯ ಶಿಕ್ಷಕ ಪುರಸ್ಕಾರ’ಕ್ಕೆ ಆಯ್ಕೆ ಮಾಡಿದ್ದು, ಆಯ್ಕೆಯಾದವರ ಪಟ್ಟಿಯನ್ನು ಶಿಕ್ಷಣ ಸಚಿವಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ರಾಜ್ಯದಿಂದ ಬೆಳ್ತಂಗಡಿ ತಾಲೂಕಿನ ನಡ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಯಾಕುಬ್ ಎಸ್., ಕಲ್ಬರ್ಗಿಯ ಅಫಜಲಪುರ ಬಂದರ್ವಾಡ್ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ, ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕ ಚೆಮ್ಮಲ್ಲಾರ್ ಷಣ್ಮುಗಂ ಅವರು ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
ಬೆಳ್ತಂಗಡಿಯ ನಡ ಸರ್ಕಾರಿ ಶಾಲೆಯ ಅಧ್ಯಾಪಕ ಯಾಕುಬ್ ಅವರು ತಮ್ಮ ಶಾಲೆಯಲ್ಲಿ ಮಕ್ಕಳಿಗೆ ಗಣಿತದ ಸುಲಭ ಕಲಿಕೆಗಾಗಿ ಸ್ಥಳೀಯರ ಸಹಕಾರದೊಂದಿಗೆ ಗಣಿತ ಪ್ರಯೋಗಾಲಯ ತೆರೆದು ಶಿಕ್ಷಣ ಇಲಾಖೆಯ ಗಮನ ಸೆಳೆದಿದ್ದರು. ಅಲ್ಲದೆ ಅವರ ಈ ಸಾಧನೆಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯೂ ದೊರೆತಿತ್ತು.
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪುರಸ್ಕಾರವನ್ನು ನೀಡಲಾಗುತ್ತದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.