ನವದೆಹಲಿ: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಂಬಳದ ಫೋಟೋವನ್ನು ಹಂಚಿಕೊಂಡು ಜನತೆಯ ಮನಗೆದ್ದಿದ್ದಾರೆ.
ಟ್ವೀಟ್ ಮಾಡಿರುವ ಅವರು,” ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಶುಭಾಶಯಗಳು. ಕೊರೋನಾ ಸಾಂಕ್ರಾಮಿಕ ರೋಗವು ಕ್ರೀಡೆಗಳನ್ನು ಕೂಡ ಬಾಧಿಸುತ್ತಿದೆ. ಇಂತಹ ಸಂದರ್ಭದಲ್ಲಿ ಶಾರೀರಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡುವುದು ಕೂಡ ಅತ್ಯಂತ ಅವಶ್ಯಕವಾಗಿದೆ. ಹೀಗಾದಾಗ ಮಾತ್ರ ಸಂಕಷ್ಟದ ಸಂದರ್ಭದಲ್ಲಿ ಹೋರಾಡಲು ಹೆಚ್ಚು ಶಕ್ತಿ ಸಿಗುತ್ತದೆ” ಎಂದಿದ್ದಾರೆ.
ನಿರಂತರವಾಗಿ ಯೋಗಾಭ್ಯಾಸ ಮತ್ತು ವ್ಯಾಯಾಮಗಳನ್ನು ಮಾಡಿ. ಫಿಟ್ ಇಂಡಿಯಾ ಅಭಿಯಾನವು ಜನ ಚಳುವಳಿಯಾಗಿ ಮುಂದುವರೆಯಲಿ ಎಂದು ಹೇಳಿದ್ದಾರೆ.
ಕಂಬಳ ಮಾತ್ರವಲ್ಲದೆ, ಕುಸ್ತಿ, ಶೂಟಿಂಗ್ ಮತ್ತು ಇತರ ಕ್ರೀಡೆಗಳ ಬಗ್ಗೆಯೂ ಅವರ ಫೋಟೋ ಹಂಚಿಕೊಂಡಿದ್ದಾರೆ.
ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉಪರಾಷ್ಟ್ರಪತಿಗಳ ನಡೆಯನ್ನು ಶ್ಲಾಘಿಸಿದ್ದಾರೆ.
राष्ट्रीय खेल दिवस की शुभकामनाएं!
कोरोना ने हमारी खेल-कूद की गतिविधियों को बाधित कर रखा है… लेकिन आज शारीरिक व मानसिक रूप से स्वस्थ रहना ज्यादा जरूरी है, तभी हम संक्रमण से लड़ पाएंगे।
अतः नियमित योग करें… व्यायाम करें… ‘फिट इंडिया’ को जन-आंदोलन बनाएं। #NationalSportsDay pic.twitter.com/E3UngDSv1v— Vice President of India (@VPSecretariat) August 29, 2020
ರಾಷ್ಟ್ರೀಯ ಕ್ರೀಡಾ ದಿನಾಚರಣೆಗೆ ಶುಭ ಹಾರೈಸಿ #FitIndiaMovement ಗೆ ಕರೆ ನೀಡಿರುವ ಮಾನ್ಯ ಉಪ ರಾಷ್ಟ್ರಪತಿ ಶ್ರೀ @MVenkaiahNaidu ಅವರು ತಮ್ಮ ಸಂದೇಶದಲ್ಲಿ ಕರಾವಳಿಯ ಹೆಮ್ಮೆಯ ಜಾನಪದ ಕ್ರೀಡೆ ಕಂಬಳದ ಫೋಟೋ ಹಂಚಿಕೊಂಡಿದ್ದಾರೆ.
ಕಂಬಳವನ್ನು ಪ್ರೋತ್ಸಾಹಿಸುತ್ತಿರುವ @VPSecretariat ಅವರಿಗೆ ಕರ್ನಾಟಕದ ಜನತೆಯ ಪರವಾಗಿ ಧನ್ಯವಾದಗಳು. https://t.co/IedPpz4unf
— Nalinkumar Kateel (@nalinkateel) August 29, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.