ಬೆಂಗಳೂರು: ಕೋಲಾರದಲ್ಲಿ ಭಾರತ್ ಗೋಲ್ಡ್ ಮೈನ್ ಲಿ. ನಲ್ಲಿ ಉಪಯೋಗಕ್ಕೊಳಗಾಗದೆಯೇ ಉಳಿದಿರುವ 3200 ಎಕರೆ ಭೂಮಿಯನ್ನು ಕೈಗಾರಿಕೆಯ ಅಭಿವೃದ್ಧಿಗಾಗಿ ಕೈಗಾರಿಕಾ ಪಾರ್ಕ್ ನಿರ್ಮಾಣ ಮಆಡಲು ರಾಜ್ಯಕ್ಕೆ ನೀಡಬೇಕೆಂದು ಮನವಿ ಮಾಡಿದ್ದ ರಾಜ್ಯ ಸರ್ಕಾರದ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಕೈಗಾರಿಕಾ ಅಭಿವೃದ್ಧಿಯ ಒಂದು ವರ್ಷದ ಸಾಧನೆಯ ಪುಸ್ತಕವನ್ನು ಸಿಎಂ ಯಡಿಯೂರಪ್ಪ ಅವರು ಅನಾವರಣಗೊಳಿಸುವ ಕಾರ್ಯಕ್ರಮದಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ, ಈ ಭೂಮಿಯನ್ನು ಬಳಸಿ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು, ಅಭಿವೃದ್ಧಿ ಮಾಡಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಳಕೆಯಾಗದೆ ಉಳಿದಿರುವ ಪ್ರದೇಶವನ್ನು ರಾಜ್ಯದ ಕೈಗಾರಿಕಾ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರಕ್ಕೆ ನೀಡಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರಲ್ಲಿ ಈ ಹಿಂದೆ ಮನವಿ ಮಾಡಿಕೊಳ್ಳಲಾಗಿತ್ತು. ಈ ಸಂಬಂಧ ಗಣಿ ಮತ್ತು ಕಲ್ಲಿದ್ದಲು ಇಲಾಖೆ ಇಲ್ಲಿ ಯಾವುದೇ ರೀತಿಯ ನೈಸರ್ಗಿಕ ಸಂಪನ್ಮೂಲ ಇಲ್ಲ ಎಂಬುದನ್ನು ಪರಿಶೀಲಿಸಿ, ಫಲಿತಾಂಶ ಕಂಡುಕೊಂಡ 6 ತಿಂಗಳ ಬಳಿಕ ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿಗೆ ಅಗತ್ಯ ಅನುಮೋದನೆಗಳ ಜೊತೆಗೆ ಭೂಮಿ ನೀಡುವ ಸಾಧ್ಯತೆ ಇರುವುದಾಗಿಯೂ ಅವರು ತಿಳಿಸಿದ್ದಾರೆ.
ಉದ್ದೇಶಿಸಿರುವ ಕೈಗಾರಿಕಾ ಪಾರ್ಕ್ ನಿರ್ಮಾಣಕ್ಕೆ ಈ ಪ್ರದೇಶ ಸೂಕ್ತವಾಗಿದೆ. ಇಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ಭರವಸೆ ನೀಡಿರುವ ಅವರು, ಈ ಯೋಜನೆಯಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆಯುವ ಭರವಸೆಯನ್ನೂ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.