ಲಕ್ನೋ: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ನಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ಮೂಲಕ ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.
ರಾಜ್ಯದ ಕಾನ್ಪುರ, ಲಿಖಿಂಪುರ ಖೇರಿ, ಬಲರಾಂ ಪುರ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಜಿಹಾದಿಗಳು ಲವ್ ಜಿಹಾದ್ ಹೆಸರಿನಲ್ಲಿ ಮಹಿಳಾ ದೌರ್ಜನ್ಯ ಎಸಗುತ್ತಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಲವ್ ಜಿಹಾದ್ ವಿಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಕಠಿಣ ಕಾನೂನು ಕ್ರಮದ ಮೂಲಕ ಇಂತಹ ಪ್ರಕರಣಗಳಲ್ಲಿ ಭಾಗಿಗಳಾಗುವವರಿಗೆ ಪಾಠ ಕಲಿಸಬೇಕು. ಆ ಮೂಲಕ ಸಮಾಜದ ಭೀತಿಯನ್ನು ತೊಡೆದು ಹಾಕಬೇಕು ಎಂದು ವಿಎಚ್ಪಿ ತಿಳಿಸಿತ್ತು.
ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವ್ನಿಶ್ ಕುಮಾರ್ ಅವಸ್ಥಿ, ಈ ಬಗ್ಗೆ ಚಿಂತನೆ ನಡೆಸಿರುವ ಯೋಗಿ ಸರ್ಕಾರ ಲವ್ ಜಿಹಾದ್ನಂತಹ ಘಟನೆಗಳು ಹೆಚ್ಚುತ್ತಿರುವುದನ್ನು ಮನಗಂಡು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಿಯಾಯೋಜನೆಗಳನ್ನು ರೂಪಿಸುವಂತೆ ಆದೇಶ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮಹಿಳಾ ದೌರ್ಜನ್ಯದ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ರೂಪಿಸಲು ಸೂಚಿಸಿರುವುದಾಗಿ ಹೇಳಿಕೆ ನೀಡಿದ್ದಾರೆ.
ಇನ್ನು ಲವ್ ಜಿಹಾದ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವಿಎಚ್ಪಿ ಕಾನ್ಪುರ ಘಟಕದ ಸಾಂಸ್ಥಿಕ ಮುಖ್ಯಸ್ಥ ಮಧುರಾಮ್ ಮಿಶ್ರಾ, ಲವ್ ಜಿಹಾದ್ ನಂತಹ ಘಟನೆಗಳು ಬಹಳ ಹಿಂದಿನಿಂದಲೂ ನಡೆಯುತ್ತಿವೆ. ಇದನ್ನು ನಡೆಸಲು ಸಕ್ರಿಯ ಗ್ಯಾಂಗ್ಗಳೂ ಇವೆ. ರಾಜ್ಯದ ಅನೇಕ ಕಡೆಗಳಲ್ಲಿ ಈ ತಂಡಗಳು ಇಂತಹ ಸಮಾಜ ದ್ರೋಹಿ ಕೃತ್ಯಗಳನ್ನು ನಡೆಸುತ್ತಿವೆ. ವಿಎಚ್ಪಿ ಈ ಸಂಬಂಧ ಜನರಲ್ಲಿ ಸಕ್ರಿಯವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಲೇ ಬಂದಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಕಾನ್ಪುರದ ಯುವತಿಯೋರ್ವಳು ಮದುವೆಯಾಗುವ ಸಲುವಾಗಿ ಮತಾಂತರಕ್ಕೆ ಒಳಗಾಗುವುದಾಗಿ ಹೇಳಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂಬಂಧ ವಿಹಿಂಪ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿ, ಬಾಲಕಿಯನ್ನು ರಕ್ಷಿಸಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದರು ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಮಾತನಾಡಿರುವ ವಿಎಚ್ಪಿಯ ಭೋಲೇಂದ್ರ ಅವರು, ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಲವ್ ಜಿಹಾದ್ನಂತಹ ಪ್ರಕರಣಗಳನ್ನು ನಡೆಸುವ ತಂಡ ಸಕ್ರಿಯವಾಗಿದೆ. ಸಮಾಜದ ಸಾಮಾನ್ಯ ವರ್ಗದ ಜನರನ್ನು ಗುರಿಯಾಗಿಸಿ ಈ ಕೃತ್ಯ ನಡೆಸುತ್ತಿದ್ದಾರೆ. ಕಾನ್ಪುರ, ಲಿಖಿಂಪುರಗಳಲ್ಲಿಯೂ ಇಂತಹ ಘಟನೆಗಳು ನಡೆದಿದೆ ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಜಿಡಿ ಪ್ರಶಾಂತ್ ಕುಮಾರ್, ಇಂತಹ ಸೂಕ್ಷ್ಮ ಪ್ರಕರಣಗಳನ್ನು ಪೊಲೀಸರು ಸೂಕ್ಷ್ಮವಾಗಿ ತನಿಖೆ ನಡೆಸುತ್ತಿದ್ದಾರೆ. ಇಂತಹ ಘಟನೆಗಳನ್ನು ತನಿಖೆ ಮಾಡುವಾಗ ಸಾಮರಸ್ಯ ಭಂಗವಾಗದಂತೆಯೂ ಎಚ್ಚರ ವಹಿಸಲಾಗುತ್ತಿದೆ. ಅಂತಹ ಘಟನೆಗಳನ್ನು ತ್ವರಿತ ತನಿಖೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.