ಮುಂಬಯಿ: ಕೋವಿಡ್-19 ಲಾಕ್ಡೌನ್ ಸಮಯದಲ್ಲಿ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣ ಮುಂಬೈನ ಕಂಬಾಚಾ ಪಾದದಲ್ಲಿನ ಬುಡಕಟ್ಟು ಮಕ್ಕಳಿಗೆ ಮಹಾರಾಷ್ಟ್ರದ ಭಾರತೀಯ ಜನತಾ ಪಾರ್ಟಿ ಘಟಕವು ಸ್ಮಾರ್ಟ್ಫೋನ್ಗಳನ್ನು ವಿತರಿಸಿದೆ.
ಇದುವರೆಗೆ 25 ಸ್ಮಾರ್ಟ್ಫೋನ್ಗಳನ್ನು ವಿತರಿಸಲಾಗಿದೆ, ಹೆಚ್ಚಿನ ಮಕ್ಕಳಿಗೆ ಸಹಾಯ ಮಾಡಲು ಉಪಕ್ರಮಗಳನ್ನು ವಿಸ್ತರಿಸಲಾಗುವುದು ಎಂದು ಪಕ್ಷ ಹೇಳಿದೆ.
“ಇಲ್ಲಿನ ಮಕ್ಕಳು ತಮ್ಮ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಮಗೆ ತಿಳಿದಾಗ, ನಾವು ಅವರನ್ನು ತಲುಪಲು ಮತ್ತು ಸ್ಮಾರ್ಟ್ಫೋನ್ಗಳನ್ನು ವಿತರಿಸಲು ನಿರ್ಧರಿಸಿದೆವು. ಇಂದು 25 ಸ್ಮಾರ್ಟ್ಫೋನ್ಗಳನ್ನು ವಿತರಿಸಲಾಗಿದ್ದರೂ, ಹತ್ತಿರದ ಇತರ ಮಕ್ಕಳಿಗೆ ಸಹಾಯ ಮಾಡಲು ಈ ಉಪಕ್ರಮವನ್ನು ಮತ್ತಷ್ಟು ವಿಸ್ತರಿಲಾಗುವುದು” ಎಂದು ಬಿಜೆಪಿ ನಾಯಕ ಸಂಜಯ್ ಪಾಂಡೆ ಹೇಳಿದ್ದಾರೆ.
“ನಮ್ಮ ಶಾಲೆಗಳು ಲಾಕ್ ಆಗಿದೆ. ನಾವು ಆನ್ಲೈನ್ ಅಧ್ಯಯನದಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಈ ಸ್ಮಾರ್ಟ್ಫೋನ್ಗಳು ನಮ್ಮ ಅಧ್ಯಯನದಲ್ಲಿ ಸಹಾಯ ಮಾಡುತ್ತವೆ. ಬಿಜೆಪಿಗೆ ಧನ್ಯವಾದಗಳುʼ” ಎಂದು 10 ನೇ ತರಗತಿ ವಿದ್ಯಾರ್ಥಿನಿ ತನೀಶಾ ಹೇಳಿದ್ದಾಳೆ.
“ಬಡವರು ಮತ್ತು ಹೆಚ್ಚಿನ ಆದಾಯವಿಲ್ಲದ ಅನೇಕ ಕುಟುಂಬಗಳಿವೆ. ಅವರಿಗೆ ತಮ್ಮ ಮಕ್ಕಳಿಗೆ ಆನ್ಲೈನ್ ತರಗತಿಗಳಿಗೆ ಸ್ಮಾರ್ಟ್ಫೋನ್ ಖರೀದಿಸಲು ಸಾಧ್ಯವಾಗುತ್ತಿಲ್ಲ. ಕೆಲವು ವಿದ್ಯಾರ್ಥಿಗಳು ಈಗ ಸ್ಮಾರ್ಟ್ಫೋನ್ಗಳನ್ನು ಹೊಂದಿದ್ದು, ಅದು ಅಧ್ಯಯನಕ್ಕೆ ಸಹಾಯ ಮಾಡುತ್ತದೆ” ಎಂದು ಸಾಮಾಜಿಕ ಕಾರ್ಯಕರ್ತೆವಿನಿತ ಠಾಕ್ರೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.