ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನಿಧನರಾಗಿದ್ದಾರೆ. ಮಿದುಳಿನ ಶಸ್ತ್ರಚಿಕಿತ್ಸೆಯ ನಂತರ ಕೋಮಾ ಸ್ಥಿತಿಗೆ ತಲುಪಿದ್ದ ಅವರು ಇಂದು ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ಮೂಲಗಳು ದೃಢಪಡಿಸಿವೆ. ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು.
ಭಾರತದ 13ನೇ ರಾಷ್ಟ್ರಪತಿಯಾಗಿ ಅವರು 2012 ರಿಂದ 2017 ರ ವರೆಗೆ ಸೇವೆ ಸಲ್ಲಿಸಿದ್ದರು. ಐದು ದಶಕಗಳ ಕಾಲ ರಾಜಕೀಯ ವೃತ್ತಿಯನ್ನು ನಡೆಸಿದ್ದ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕರಾಗಿದ್ದರು ಮತ್ತು ಸರಕಾರದಲ್ಲಿ ಹಲವು ಉನ್ನತ ಹುದ್ದೆಗಳನ್ನು ಅವರು ನಿಭಾಯಿಸಿದ್ದರು.
ರಾಷ್ಟ್ರಪತಿಯಾಗಿ ಆಯ್ಕೆಯಾಗುವ ಮೊದಲು, ಮುಖರ್ಜಿ ಅವರು 2009 ರಿಂದ 2012 ರವರೆಗೆ ಕೇಂದ್ರ ಹಣಕಾಸು ಸಚಿವರಾಗಿದ್ದರು.
ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು 2019 ರಲ್ಲಿ ಇವರಿಗೆ ಪ್ರದಾನಿಸಲಾಯಿತು.
ಪ್ರಣಬ್ ಬ್ರಿಟಿಷ್ ಭಾರತದ ಬಂಗಾಳ ಪ್ರೆಸಿಡೆನ್ಸಿಯಲ್ಲಿರುವ ಮಿರತಿಯಲ್ಲಿರುವ ಬಂಗಾಳಿ ಕುಟುಂಬದಲ್ಲಿ ಜನಿಸಿದರು (ಈಗ ಭಾರತದ ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆ). ಅವರ ತಂದೆ, ಕಾಮದಾ ಕಿಂಕರ್ ಮುಖರ್ಜಿ ಅವರು ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು ಮತ್ತು 1952 ಮತ್ತು 1964 ರ ನಡುವೆ ಪಶ್ಚಿಮ ಬಂಗಾಳ ವಿಧಾನ ಪರಿಷತ್ತಿನ ಸದಸ್ಯರಾಗಿದ್ದರು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರತಿನಿಧಿಯಾಗಿದ್ದರು ಮತ್ತು ಎಐಸಿಸಿ ಸದಸ್ಯರಾಗಿದ್ದರು. ಅವರ ತಾಯಿ ರಾಜಲಕ್ಷ್ಮಿ ಮುಖರ್ಜಿ.
ಇವರ ಸಂಸತ್ತಿನ ವೃತ್ತಿಜೀವನ ಐದು ದಶಕದ್ದು, ಇವರು ಕಾಂಗ್ರೆಸ್ ಪಕ್ಷದಿಂದ 1969 ರಲ್ಲಿ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಗೊಂಡರು; ನಂತರ 1975, 1981, 1993 ಹಾಗು 1999ರಲ್ಲಿ ಪುನರಾಯ್ಕೆಗೊಂಡರು. 1982ರಿಂದ 1984 ರವರಗೆ ಭಾರತದ ವಿತ್ತ ಮಂತ್ರಿಯಾಗಿದ್ದರು
ರಕ್ಷಣೆ, ವಿತ್ತ, ಬಾಹ್ಯ ಇಲಾಖೆ, ಆದಾಯ, ನೌಕಾ, ಸಾರಿಗೆ, ಸಂಪರ್ಕ ವ್ಯವಸ್ಥೆ, ಆರ್ಥಿಕ ಇಲಾಖೆ, ವಾಣಿಜ್ಯ ಹಾಗು ಉದ್ದಿಮೆ ಹೀಗೆ ಹಲವು ಖಾತೆಗಳನ್ನು ನಿಭಾಯಿಸಿದ ಹಿರಿಮೆ ಅವರದ್ದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.