ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗುಲಿ ಗಂಭೀರ ಆರೋಗ್ಯ ಸಮಸ್ಯೆಗೆ ತುತ್ತಾಗಿರುವವರಿಗೆ ಶೀಘ್ರ ಚಿಕಿತ್ಸೆ ನೀಡಲು ಆಸ್ಪತ್ರೆಗೆ ಸಾಗಿಸಲು ಪೂರಕವಾಗುವಂತೆ ಏರ್ ಆಂಬುಲೆನ್ಸ್ ವ್ಯವಸ್ಥೆ ಒದಗಿಸಲು ಸರ್ಕಾರ ಮುಂದಾಗಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಈ ವ್ಯವಸ್ಥೆ ಜಾರಿಯಾಗಲಿದ್ದು, ಇದೇ ಪ್ರಪ್ರಥಮ ಬಾರಿಗೆ ಜಕ್ಕೂರು ಏರ್ ಡ್ರಮ್ಸ್ ನಿಂದ ಈ ಏರ್ ಆಂಬ್ಯುಲೆನ್ಸ್ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಕುಗ್ರಾಮಗಳಲ್ಲಿರುವ ಕೊರೋನಾ ಸೋಂಕಿನಿಂದ ಗಂಭೀರ ಪರಿಣಾಮ ಎದುರಿಸುತ್ತಿರುವವರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ಅನುಕೂಲವಾಗುವಂತೆ ಈ ವ್ಯವಸ್ಥೆ ಕಾರ್ಯ ನಿರ್ವಹಿಸಲಿದೆ.
ಐಕಾತ್ ಕ್ಯಾತಿ ಏರ್ ಆಂಬ್ಯುಲೆನ್ಸ್ನಿಂದ ಈ ಸೇವೆ ದೊರೆಯಲಿದ್ದು, ಇದರಲ್ಲಿ ನರ್ಸ್ ಮತ್ತು ಇಬ್ಬರು ಪೈಲಟ್ ಇರಲಿದ್ದಾರೆ. ಈ ಸೇವೆಯನ್ನು ಬೆಂಗಳೂರಿನಲ್ಲಿ ಆರಂಭ ಮಾಡಲು ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮೊದಲು ಈ ರೀತಿಯ ಏರ್ ಆಂಬ್ಯುಲೆನ್ಸ್ ಸೇವೆಯನ್ನು ದೆಹಲಿ, ಮುಂಬೈಗಳಲ್ಲಿಯೂ ನೀಡುತ್ತಿದ್ದುದಾಗಿ ಐಕಾತ್ ಸಂಸ್ಥೆ ಮಾಹಿತಿ ನೀಡಿದೆ. ಈ ಸೇವೆಗಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಡಿಜಿ ಅವರಿಂದ ಅನುಮತಿ ಪಡೆಯಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ 7-8 ಏರ್ ಆಂಬ್ಯುಲೆನ್ಸ್ಗಳು ಕಾರ್ಯ ನಿರ್ವಹಿಸುತ್ತಿರುವುದಾಗಿಯೂ ಸಂಸ್ಥೆ ಹೇಳಿಕೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.