ನವದೆಹಲಿ: ಪೂರ್ವ ಲಡಾಕ್ನ ಪಾಂಗಾಂಗ್ ಸರೋವರದ ಸಮೀಪದಲ್ಲಿ ಅಶಾಂತಿಯ ಪರಿಸ್ಥಿತಿ ಉಂಟಾಗಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ಸೇನಾಧಿಕಾರಿಗಳ ನಡುವೆ ಮತ್ತೆ ಮಾತುಕತೆ ನಡೆದಿದೆ.
ಪಾಂಗಾಂಗ್ ಸರೋವರದ ಪರಿಸರದಲ್ಲಿ ಉಂಟಾಗಿರುವ ಉದ್ವಿಗ್ನ ಸ್ಥಿತಿಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಈ ಮಹತ್ವದ ಮಾತುಕತೆ ನಡೆದಿದೆ ಎನ್ನಲಾಗಿದೆ. ಅದರಂತೆಯೇ ನವದೆಹಲಿಯ ಭೂಸೇನೆಯ ಪ್ರಧಾನ ಕಛೇರಿಯಲ್ಲಿಯೂ ಈ ಸಂಬಂಧ ಸೇನೆಯ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರು ಹಿರಿಯ ಸೇನಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನತೆ, ಪ್ರಸ್ತುತ ಅಲ್ಲಿನ ಸ್ಥಿತಿಗತಿಗಳ ಕುರಿತಾಗಿಯೂ ಅವರು ಪೂರಕ ಮಾಹಿತಿ ಪಡೆದುಕೊಂಡರು.
ಈ ಭಾಗದಲ್ಲಿ ಭದ್ರತೆ ಒದಗಿಸುವ ಸಲುವಾಗಿ ಸುತ್ತಮುತ್ತಲಿನ ಸ್ಥಳಗಳಲ್ಲಿ ಸೇನೆಯ ವಿಶೇಷ ತುಕಡಿಗಳನ್ನು ನೇಮಿಸಲಾಗಿದೆ. ಕಣಿವೆ ಮತ್ತು ಪರ್ವತ ಪ್ರದೇಶಗಳಲ್ಲಿಯೂ ಹೆಚ್ಚಿನ ಭದ್ರತೆಗೆ ಆದ್ಯತೆ ನೀಡಲಾಗಿದೆ. ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ ಮತ್ತು ಪಾಂಗಾಂಗ್ ಪ್ರದೇಶದಲ್ಲಿ ಹೆಚ್ಚಿನ ಗಮನ ವಹಿಸುವಂತೆ ವಾಯುಪಡೆಗೆ ಸೂಚಿಸಲಾಗಿದೆ. ಲಡಾಕ್ನಲ್ಲಿ ಹಲವು ಸಮಯದಿಂದ ಬೀಡು ಬಿಟ್ಟಿರುವ ಸುಖೋಯ್ 30 ಎಂಕೆಐ, ಜಾಗ್ವಾರ್, ಮಿರಾಜ್ 2000 ವಿಮಾನಗಳು ಹೆಚ್ಚಿನ ಭದ್ರತಾ ದೃಷ್ಟಿಯಿಂದ ಕಾರ್ಯ ನಿರ್ವಹಿಸುತ್ತಿವೆ. ಜೆ-20 ವಿಮಾನಗಳು ಚೀನಾ ಗಡಿ ಪ್ರದೇಶದಲ್ಲಿಯೂ ಹಾರಾಟ ನಡೆಸಿ ಪರಿಸ್ಥಿತಿ ಅವಲೋಕಿಸಿರುವುದಾಗಿ ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.