ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಂತೆ ಕೇಂದ್ರದ ಸಂಪುಟದ ಸಚಿವರನ್ನು ಅವಹೇಳನ ಮಾಡುವ ಕೆಲಸವನ್ನು ಫೇಸ್ಬುಕ್ ಸಿಬ್ಬಂದಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಫೇಸ್ಬುಕ್ನ ಸಿಇಒ ಮಾರ್ಕ್ ಝುಕರ್ ಬರ್ಗ್ಗೆ ಪತ್ರ ಬರೆದಿದ್ದಾರೆ.
2019 ರಲ್ಲಿ ದೇಶದಲ್ಲಿ ನಡೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ, ಬಲಪಂಥೀಯ ಚಿಂತನೆಗಳು, ಬಿಜೆಪಿ ಬೆಂಬಲಿಗ ನಾಯಕರುಗಳಿಗೆ ಸಪೋರ್ಟ್ ಮಾಡದಂತೆ, ಅವರಿಗೆ ಪ್ರಚಾರ ನೀಡದಂತೆ, ಅವರು ಹೆಚ್ಚು ಜನರನ್ನು ತಲುಪಲು ಸಾಧ್ಯವಾಗದಂತೆ ಫೇಸ್ಬುಕ್ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಸಂಸ್ಥೆಯ ಸಿಬ್ಬಂದಿ ಪಕ್ಷಪಾತಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಈ ಸಂಬಂಧ ಸಂಸ್ಥೆಗೆ ಅನೇಕ ಪತ್ರಗಳನ್ನು ಬರೆಯಲಾಗಿದ್ದರೂ, ಆ ಪತ್ರಗಳಿಗೆ ಅವರು ಉತ್ತರ ನೀಡಿಲ್ಲ ಎಂದು ಹೇಳಿದ್ದಾರೆ.
ಫೇಸ್ಬುಕ್ನ ಈ ಧೋರಣೆ ಪ್ರಜಾಪ್ರಭುತ್ವವನ್ನು ಅಪಖ್ಯಾತಿಗೆ ಒಳಪಡಿಸುವಂತಿದೆ. ಸಮಾಜವನ್ನು ಆಂತರಿಕವಾಗಿ ಒಡೆದು ಅಸ್ಥಿರ ಸಮಾಜ ನಿರ್ಮಾಣಕ್ಕೆ ಸಾಮಾಜಿಕ ಮಾಧ್ಯಮ ಬಳಕೆ ಮಾಡುತ್ತಿದ್ದಾರೆ. ಆದ್ದರಿಂದ ಫೇಸ್ಬುಕ್ ಇಂಡಿಯಾ ತಂಡದ ಕಾರ್ಯ ನಿರ್ವಹಣೆಯ ಬಗ್ಗೆ ಸರಿಯಾದ ತನಿಖೆ ನಡೆಸಲು ಉನ್ನತ ತಂಡವನ್ನು ನಿಯೋಜನೆ ಮಾಡಿ, 2 ತಿಂಗಳೊಳಗಾಗಿ ಆ ತನಿಖೆಯ ವರದಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆಯೂ ಸಚಿವರು ಈ ಪತ್ರದ ಮೂಲಕ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.