ನವದೆಹಲಿ: ಪಿಎಂ ಕೇರ್ಸ್ ಫಂಡ್ ಸ್ಥಾಪಿಸಿದ ಕೆಲವೇ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಕ ದೇಣಿಕೆಯಾಗಿ 2.25 ಲಕ್ಷ ರೂಪಾಯಿಯನ್ನು ದೇಣಿಗೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಪಿಎಂ ಕೇರ್ಸ್ ಅಡಿಯಲ್ಲಿ ಸಂಗ್ರಹಿಸಿದ ಹಣವನ್ನು ಕೊರೋನಾವೈರಸ್ ಸಾಂಕ್ರಾಮಿಕ ವಿರುದ್ಧದ ಹೋರಾಟಕ್ಕೆ ಬಳಸಿಕೊಳ್ಳಲಾಗುತ್ತಿದೆ.
“ಪಿಎಂ ಕೇರ್ಸ್ ಫಂಡ್ ಸ್ಥಾಪನೆಯಾದ ಕೂಡಲೇ ಪಿಎಂ ಮೋದಿ ರೂ. 2.25 ಲಕ್ಷವನ್ನು ದೇಣಿಗೆ ನೀಡಿದ್ದರು” ಎಂದು ಪಿಎಂಒ ಅಧಿಕಾರಿಯೊಬ್ಬರು ಹೇಳಿದ್ದಾರೆ.
“ಪಿಎಂ ಮೋದಿಯವರು ಹೆಣ್ಣು ಮಕ್ಕಳ ಶಿಕ್ಷಣದಿಂದ ಹಿಡಿದು ಗಂಗಾನದಿ ಸ್ವಚ್ಚತೆ, ದೀನದಲಿತರ ಕಲ್ಯಾಣದವರೆಗೆ ಸಾರ್ವಜನಿಕ ಕಾರಣಗಳಿಗೆ ಕೊಡುಗೆ ನೀಡುವ ದೀರ್ಘ ಪರಂಪರೆಯನ್ನು ಹೊಂದಿದ್ದಾರೆ. ಅವರ ಒಟ್ಟು ದೇಣಿಗೆಗಳು ಈಗ ರೂ. 103 ಕೋಟಿಗಳನ್ನು ಮೀರಿವೆ” ಎಂದು ಅಧಿಕಾರಿ ಹೇಳಿದ್ದಾರೆ.
ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ನಡೆದ ಕುಂಭಮೇಳದಲ್ಲಿ ಭಾಗಿಯಾದ ಸ್ವಚ್ಛತಾ ಕಾರ್ಮಿಕರ ಕಲ್ಯಾಣಕ್ಕಾಗಿ ಪಿಎಂ ಮೋದಿ ಕಳೆದ ವರ್ಷ ತಮ್ಮ ವೈಯಕ್ತಿಕ ಉಳಿತಾಯದಿಂದ ರೂ. 21 ಲಕ್ಷವನ್ನು ನೀಡಿದ್ದರು. ದಕ್ಷಿಣ ಕೊರಿಯಾದ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಪಡೆದ ಪ್ರಧಾನಿ ಮೋದಿ ಪ್ರಶಸ್ತಿ ಮೊತ್ತ 1.3 ಕೋಟಿ ರೂಪಾಯಿಯನ್ನು ಗಂಗಾ ಸ್ವಚ್ಛತೆಗೆ ನೀಡಿದ್ದರು. ಮೆಮೆಂಟೋಗಳನ್ನು ಹರಾಜು ಹಾಕಿ ಅದರಲ್ಲಿ ಪಡೆದ ರೂ. 3.40 ಕೋಟಿಯನ್ನು ನದಿ ಸ್ವಚ್ಛತಾ ಕಾರ್ಯಾಚರಣೆಗೆ ದೇಣಿಗೆ ನೀಡಿದ್ದಾರೆ ಎಂದು ಪಿಎಂಒ ಅಧಿಕಾರಿಗಳು ತಿಳಿಸಿದ್ದಾರೆ.
ಇಷ್ಟು ಮಾತ್ರವಲ್ಲದೇ ಇನ್ನೂ ಅನೇಕ ದೇಣಿಗೆಗಳನ್ನು ಮೋದಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.