ಬೆಂಗಳೂರು: ನಗರದಲ್ಲಿ ಸದ್ಯ ಸದ್ದು ಮಾಡುತ್ತಿರುವ ಡ್ರಗ್ಸ್ ಮಾಫಿಯಾದಲ್ಲಿ ಕೇರಳದ ಸಿಪಿಐ(ಎಂ) ನಾಯಕರೋರ್ವರ ಪುತ್ರನ ಪಾತ್ರ ಇರುವುದಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಯುವಘಟಕ ಗಂಭೀರ ಆರೋಪವನ್ನು ಮಾಡಿದೆ.
ಕೇರಳದ ಸಿಪಿಐ(ಎಂ) ಪಕ್ಷದ ಕಾರ್ಯದರ್ಶಿ ಕೋಡಿಯೇರಿ ಬಾಲಕೃಷ್ಣನ್ ಎಂಬವರ ಪುತ್ರ ಬಿನೀಶ್ ಕೊಡಿಯೇರಿಗೂ, ಬೆಂಗಳೂರಿನ ಡ್ರಗ್ಸ್ ಮಾಫಿಯಾದ ಜಾಲಕ್ಕೂ ನಿಕಟ ಸಂಪರ್ಕವಿದೆ ಎಂದು ಐಯುಎಂಎಲ್ ಯುವ ಘಟಕದ ಸದಸ್ಯರು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಕಮ್ಮನಹಳ್ಳಿಯ ಮೊಹಮ್ಮದ್ ಅನೂಪ್ ಎಂಬಾತ ಪ್ರಮುಖ ಆರೋಪಿಯಾಗಿದ್ದು, ಈತನ ಉದ್ಯಮಕ್ಕೆ ಬಿನೀಶ್ ಆರ್ಥಿಕ ಹೂಡಿಕೆ ಮಾಡುತ್ತಿದ್ದುದಾಗಿಯೂ ಆರೋಪದಲ್ಲಿ ತಿಳಿಸಿದ್ದಾರೆ.
ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ಬಿನೀಶ್, ಅನೂಪ್ ಹೊಟೇಲ್ ಉದ್ಯಮಕ್ಕೆ ಆರ್ಥಿಕ ಸಾಲ ನೀಡಿದ್ದು ಹೌದು. ಆದರೆ ಆತನಿಗೆ ಡ್ರಗ್ಸ್ ಮಾಫಿಯಾದ ಲಿಂಕ್ ಇರುವುದು ನನಗೆ ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕೇರಳ ಬಿಜೆಪಿ ಪಕ್ಷವೂ ಒತ್ತಾಯಿಸಿರುವುದಾಗಿ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.