ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ರಾಜ್ಯಕ್ಕೆ ಹೆಚ್ಚು ಸಹಾಯವಾಗಲಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಅತೀ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು ಈ ನೀತಿಯಿಂದ ಅನುಕೂಲ ಪಡೆಯಲಿವೆ ಎಂದು ಅವರು ತಿಳಿಸಿದ್ದಾರೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿ 2020 ರಾಜ್ಯದಲ್ಲಿ ಜಾರಿಗೆ ತರುವ ಕುರಿತಂತೆ ರಾಜ್ಯದ ವಿವಿಧ ಸರ್ಕಾರಿ ವಿವಿ ಗಳ ಕುಲಪತಿಗಳ ಜೊತೆಗೆ ಸುಧೀರ್ಘ ಸಮಾಲೋಚನೆ ನಡೆಸಿದ ರಾಜ್ಯಪಾಲರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಲ್ಲಾ ರೀತಿಯ ಶಿಕ್ಷಣ ಕ್ಷೇತ್ರದಲ್ಲಿಯೂ ಹೊಸತನವನ್ನು ಪರಿಚಯ ಮಾಡಲು ಇದು ಸಹಾಯ ಮಾಡಲಿದೆ. ಈ ಹೊಸ ನೀತಿ ಹೆಚ್ಚು ವಿಶಾಲವಾಗಿದ್ದು, ಹಲವು ವಿಭಿನ್ನ ಆಯಾಮಗಳನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಸಂಪೂರ್ಣ ಶೈಕ್ಷಣಿಕ ಚಿತ್ರಣವನ್ನೇ ಸಕಾರಾತ್ಮಕವಾಗಿ ಈ ಹೊಸ ನೀತಿ ಬದಲಾಯಿಸಲಿದೆ ಎಂದು ಅವರು ತಿಳಿಸಿದ್ದಾರೆ.
ತಾಂತ್ರಿಕ ಶಿಕ್ಷಣಗಳಿಗೆ ಸಂಬಂಧಿಸಿದಂತೆ ತಂತ್ರಜ್ಞಾನಗಳ ಬದಲಾವಣೆ, ಆರೋಗ್ಯ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳಿಗೆ ಅವಕಾಶ ಈ ನೀತಿಯಿಂದ ದೊರೆಯಲಿದೆ. ಪ್ರಾಥಮಿಕ ಶಿಕ್ಷಣದಿಂದ ತೊಡಗಿ ಉನ್ನತ ಶಿಕ್ಷಣ ಕ್ಷೇತ್ರಗಳವರೆಗೆ ಸಮಗ್ರ ಬದಲಾವಣೆ, ಹೊಸತನ ಈ ನೀತಿಯನ್ನು ಜಾರಿಗೊಳಿಸುವುದರಿಂದ ಸಾಧ್ಯವಾಗಲಿದೆ. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ವಿಶ್ವ ವಿದ್ಯಾಲಯಗಳ ಪಾತ್ರ ಮುಖ್ಯವಾಗಿದ್ದು, ಎಲ್ಲಾ ಆಯಾಮಗಳ ಬಗೆಗೂ ಸಂಪೂರ್ಣ ತಿಳುವಳಿಕೆ ಪಡೆಯುವುದು ಅಗತ್ಯ ಎಂದು ಅವರು ನಿರ್ದೇಶಿಸಿದ್ದಾರೆ.
ಈ ಸಮಾಲೋಚನಾ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಸೇರಿದಂತೆ, 20 ಕ್ಕೂ ಅಧಿಕ ವಿವಿಗಳ ಕುಲಪತಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.